Connect with us

Dvgsuddi Kannada | online news portal | Kannada news online

ಡಿ.ಕೆ.ಶಿವಕುಮಾರ್ ಬಂಧನಕ್ಕೆ ರಾಜ್ಯದಾದ್ಯಂತ ಆಕ್ರೋಶ

ರಾಜಕೀಯ

ಡಿ.ಕೆ.ಶಿವಕುಮಾರ್ ಬಂಧನಕ್ಕೆ ರಾಜ್ಯದಾದ್ಯಂತ ಆಕ್ರೋಶ

ಡಿವಿಜಿಸುದ್ದಿ, ಕಾಂ, ಬೆಂಗಳೂರು:ಅಕ್ರಮ ಹಣ ವರ್ಗವಣೆ ತನಿಖೆಗೆ ಪೂರಕವಾಗಿ ಸ್ಪಂದಿಸುತ್ತಿಲ್ಲ ಎನ್ನುವ ಆರೋಪದಡಿಯಲ್ಲಿ ಜಾರಿ ನಿರ್ದೇಶನಾಲಯ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ವಶಕ್ಕೆ ಪಡೆಯುತ್ತಿದ್ದಂತೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ.

ನಿನ್ನೆ ರಾತ್ರಿ ಡಿ.ಕೆ.ಶಿವಕುಮಾರ್ ಬಂಧನವಾಗುತ್ತಿದ್ದಂತೆ ರಾಮನಗರ, ಕನಕಪುರ, ಬಳ್ಳಾರಿ, ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ತಡ ರಾತ್ರಿ ವರೆಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿ ಟೈರ್ ಗೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಇನ್ನು ಡಿಕೆಶಿ ಅವರ ಸ್ವಕ್ಷೇತ್ರ ಕನಕಪುರದಲ್ಲಿ ಪ್ರತಿಭಟನೆಯ ತೀವ್ರತೆ ಹೆಚ್ಚಾಗಿತ್ತು. ಈ ಪ್ರತಿಭಟನೆಗೆ ಎರಡು ಕೆಎಸ್ ಆರ್ ಟಿಸಿ ಬಸ್ ಗಳಿಗೂ ಕೂಡ ಬೆಂಕಿ ಹಚ್ಚಲಾಗಿದೆ.

ಇನ್ನು ಡಿ.ಕೆ.ಶಿವಕುಮಾರ್ ಬಂಧನಕ್ಕೆ ಮಾಜಿ ಸಿಎಂ ಸಿದ್ದರಾಮ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸೇರಿದಂತೆ ಅನೇಕ ನಾಯಕರು ಟ್ವಿಟರ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಾವಣಗೆರೆಯಲ್ಲಿಯೂ ಕೂಡ ನಿನ್ನೆ ರಾತ್ರಿ ಯುವ ಕಾಂಗ್ರೆಸ್ ಘಟಕದ ವತಿಯಿಂದ ಜಯದೇವ ವೃತ್ತದಲ್ಲಿ ಡಿ. ಬಸವರಾಜು, ಎಲ್. ಎಚ್ ಸಾಗರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಡಿಕೆಶಿ ಬಂಧನ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.

ಇನ್ನು ಇವತ್ತು ಕೂಡ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ರಾಜ್ಯ ಕಾಂಗ್ರೆಸ್ ನಿರ್ಧರಿಸಿದೆ. ದಾವಣಗೆರೆಯಲ್ಲಿಯೂ ಕೂಡ ಬೆಳಗ್ಗೆ 11 ಗಂಟೆಗೆ ಜಯದೇವ ಸರ್ಕಲ್ ಬಳಿ ಕೆಪಿಸಿಸಿ ಜಿಲ್ಲಾಧ್ಯಕ್ಷ ಮಂಜಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಜಕೀಯ

To Top