ಆಶಾ ಕಾರ್ಯಕರ್ತೆಯರು ಪ್ರತಿಭಟನೆಗೆ ಮುಂದಾಗದಂತೆ ಆರೋಗ್ಯ ಸಚಿವರ ಮನವಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರು ಉತ್ತಮ ಕೆಲಸ ನಿರ್ವಹಿಸುತ್ತಿದ್ಧಾರೆ. ಇದಕ್ಕಾಗಿ ಸರ್ಕಾರ 3 ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡಿದೆ. ಹೀಗಾಗಿ ಆಶಾ ಕಾರ್ಯಕರ್ತೆಯರು ಸಂಕಷ್ಟದ ಸಮಯದಲ್ಲಿ ಪ್ರತಿಭಟನೆಗೆ ಮುಂದಾಗಬಾರದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಮನವಿ ಮಾಡಿದರು..

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು,  ಇವರ ಉತ್ತಮ ಕಾರ್ಯವನ್ನು ಮೆಚ್ಚಿದ ಸರ್ಕಾರ 3 ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡಿದೆ. ಕೊರೊನಾ ಸಂಕಷ್ಟದ ಸಮುದಲ್ಲಿ ಪ್ರತಿಭಟನೆಗೆ ಇಳಿಯುವುದು ಸರಿಯಲ್ಲ ಎಂದರು.

ರಾಜ್ಯದಲ್ಲಿನ ಕೊರೊನಾ ಸ್ಥಿತಿಗತಿ ತಿಳಿಯಲು ಕೇಂದ್ರ ಸರ್ಕಾರದ ತಂಡ ರಾಜ್ಯಕ್ಕೆ ಬಂದಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಸಭೆ ನಡೆಯಿತು. ಕೇಂದ್ರ ತಂಡಕ್ಕೆ ಸಿಎಂ ಯಡಿಯೂರಪ್ಪ ಅವರು, ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳನ್ನು ವಿವರಿಸಿದರು. ರಾಜ್ಯ ಸರ್ಕಾರ ತಗೆದುಕೊಂಡ ಕ್ರಮಕ್ಕೆ ಕೇಂದ್ರ ತಂಡ ಮೆಚ್ಚುಗೆ ವ್ಯಕ್ತಪಡಿಸಿದೆ. ಕಂಟೈನ್ಮೆಂಟ್ ಜೋನ್ ಗಳಲ್ಲಿ ಹೆಚ್ಚಿನ ತಪಾಸಣೆ ನಡೆಸುವಂತೆ ಸೂಚನೆ ನೀಡಿದ್ದಾರೆ. ಸಭೆಯ ಬಳಿಕೆ ಬೆಂಗೂರಿನ ಕಂಟೈನ್ಮೆಂಟ್ ಜೋನ್ ಗಳಿಗೆ ಭೇಟಿ ನೀಡಿ ಪರಿಸೀಲನೆ ನಡೆಸಿ ನಂತರ ಮತ್ತೆ ಸಭೆ ಸೇರುವುದಾಗಿ ಹೇಳಿದ್ದಾರೆ ಎಂದರು.

ರಾಜ್ಯದಲ್ಲಿ ಕೊರೊನಾ ವೈರಸ್ ಮೂರನೇ ಹಂತಕ್ಕೆ ಹೋಗಿಲ್ಲ. ಇನ್ನು ಕೂಡ ೆರಡನೇ ಹಂತದಲ್ಲಿಯೇ ಇದೆ. ಕಂಟೈನ್ಮೆಂಟ್ ಜೋನ್ ಗಳಲ್ಲಿ ಹೆಚ್ಚು ಹೆಚ್ಚು ತಪಾಸಣೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *