ಸಂಸದೆ ಸುಮಲತಾ ಭೇಟಿ ಕೊಟ್ಟ ಸ್ಥಳದಲ್ಲಿ ಆತಂಕ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಮಂಡ್ಯ: ಸಂಸದೆ ಎ.ಸುಮಲತಾ ಅವರಿಗೆ ಕೊರೊನಾ ಪಾಸಿಟಿವ್ ಪತ್ತೆಯಾದ ಹಿನ್ನೆಲೆ ಅವರು ಜಿಲ್ಲೆಯ ಕಳೆದ ಒಂದು ವಾರದಲ್ಲಿ ವಿವಿಧ ಸ್ಥಳಗಳಿಗೆ ಭೇಟಿ ಕೊಟ್ಟಿದ್ದರು. ಇದೀಗ ಭೇಟಿ ಕೊಟ್ಟ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಜೂನ್‌ 30ರಂದು ಸುಮಲತಾ ಅವರು ನಾಗಮಂಗಲ ತಾಲ್ಲೂಕು ಬ್ರಹ್ಮದೇವರಹಳ್ಳಿ ಭೇಟಿ ಕೊಟ್ಟಿದ್ದರು. ಅಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಿದ್ದರು. ಅವರೊಂದಿಗೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಪಾಲ್ಗೊಂಡಿದ್ದರು. ಜೊತೆಗೆ ಮಂಡ್ಯ ರೈತ ಸಭಾಂಗಣದಲ್ಲಿ ಕೊರೊನಾ ವಾರಿಯರ್ಸ್‌ಗಳಿಗೆ ಅಭಿನಂದಿಸಿದ್ದರು. ಪಾಂಡವಪುರ ಸರ್ಕಾರಿ ಶಾಲೆಯ ಕಾಂಪೌಂಡ್‌ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ್ದರು.

ಜುಲೈ 1ರಂದು ಬೆಸಗರಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಬಸ್‌ ನಿಲ್ದಾಣ ಕಾಮಗಾರಿ ವೀಕ್ಷಣೆ ಮಾಡಿದ್ದರು. ಸಮುದಾಯ ಭವನದ ಬಳಿ ಸಸಿ ನೆಟ್ಟು  ಗ್ರಾಮಸ್ಥರಿಗೂ  ಸಸಿ ವಿತರಣೆ ಮಾಡಿದ್ದರು. ಈಗ ಈ ಸ್ಥಳಗಳಲ್ಲಿ ಆತಂಕ ಮನೆ ಮಾಡಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್  ,ಸಂಸದರು ಓಡಾಡಿರುವ ಜಾಗದ ಮಾಹಿತಿ ಪಡೆಯಲಾಗಿದೆ. ಅವರ ಸಂಪರ್ಕಕ್ಕೆ ಬಂದಿರುವವರನ್ನು ಕ್ವಾರಂಟೈನ್ ಮಾಡಲಾಗುವುದು ಎಂದಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *