4 ಕೋಟಿ ಕಳ್ಳತನ ಮಾಡಿದ್ದ ಬ್ಯಾಂಕಿನಲ್ಲಿ ಮತ್ತೆ ಕಳ್ಳತನ..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿಸುದ್ದಿ.ಕಾಂ, ದಾವಣಗೆರೆ: ಕಳೆದ ನಾಲ್ಕು ವರ್ಷದ ಹಿಂದೆ ದಾವಣಗೆರೆ ಜಿಲ್ಲೆ ಜನರನ್ನೇ ಬೆಚ್ಚಿ ಬೀಳಿಸಿದ್ದ ಬ್ಯಾಂಕ್ ದರೋಡೆ ಕೋರರು, ಇದೀಗ ಮತ್ತೆ ಅದೇ ಬ್ಯಾಂಕ್ ನ ಗೋಡೆ ಕೊರೆದು ದರೋಡೆ ಮಾಡಿದ್ದಾರೆ.

bank thief dvgsuddi

ದಾವಣಗೆರೆ ಜಿಲ್ಲೆ ಅರಕೆರೆ ಕರ್ನಾಟಕ ಬ್ಯಾಂಕ್ ನಲ್ಲಿ ನಾಲ್ಕು ವರ್ಷದ  ಹಿಂದೆ 4 ಕೋಟಿಯ ಚಿನ್ನಾಭರಣ, ನಗದು ಕಳ್ಳತನವಾಗಿತ್ತು. ಆ ದುರಂತ  ಇನ್ನು ಮಾಸುವ ಮುನ್ನವೇ  ಮತ್ತೇ ಕಳ್ಳರು ಅದೇ ಬ್ಯಾಂಕಿಗೆ ಕನ್ನ ಹಾಕಿದ್ದಾರೆ.

ನಾಲ್ಕು ವರ್ಷದ ಹಿಂದೆ ಹೊನ್ನಾಳಿ -ಶಿವಮೊಗ್ಗ ರಸ್ತೆಯ ಅರಕೆರೆಯ ಕರ್ನಾಟಕ  ಬ್ಯಾಂಕ್  ಶಾಖೆಗೆ ಕನ್ನ ಹಾಕಿದ್ದ ಕಳ್ಳರು, ಇದೀಗ ಅದೇ ಮಾದರಿಯಲ್ಲಿ ಗೋಡೆ ಕೊರೆದು ದರೋಡೆ ಮಾಡಿದ್ದಾರೆ.  ಬ್ಯಾಂಕ್   ಹಿಂಬಂದಿಯ ಗೋಡೆ  ಕೊರೆದು ಚಿನ್ನಾಭರಣ ಸಹಿತ  ನಗದು ಹಣವನ್ನು ದೋಚಿದ್ದಾರೆ.

ಸ್ಥಳಕ್ಕೆ ಹೊನ್ನಾಳಿ ಪೊಲೀಸರು ಸೇರಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ  ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಕಳ್ಳತನ ಬೇಧಿಸಲು 2 ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *