ಕೊರೊನಾ ಸಂಕಷ್ಟ ಸಮಯದಲ್ಲಿ ಮನುಷ್ಯತ್ವ ಇರೋರು ದುಡ್ಡು ಹೊಡೆಯಲ್ಲ: ಎಸ್. ಟಿ. ಸೋಮಶೇಖರ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಮೈಸೂರುಕೋವಿಡ್‌ ಸನ್ನಿವೇಶದಲ್ಲಿ ಮನುಷ್ಯತ್ವ ಇರೋರು ದುಡ್ಡು ಹೊಡೆಯಲ್ಲ ಎಂದು ಸಚಿವ ಎಸ್. ಟಿ. ಸೋಮಶೇಖರ್  ವೈದ್ಯಕೀಯ ಉಪಕರಣಗಳ ಖರೀದಿ ಅವ್ಯಹಾರ ಆರೋಪಕ್ಕೆ ತಿರುಗೇಟು ನೀಡಿದರು.

ಸುದ್ದಿಗಾರೊಂದಿಗೆ ಮಾತನಾಡಿದ ಅವರು,  ಆರಂಭದಲ್ಲಿ ವೈದ್ಯಕೀಯ ಪರಿಕರಗಳ ಬೆಲೆ ಹೆಚ್ಚಾಗಿದ್ದವು. ಈಗ ಸ್ಪರ್ಧೆ ಕಾರಣದಿಂದ ಬೆಲೆ ಕಡಿಮೆ ಆಗಿದೆ. ಈ ಬಗ್ಗೆ ‌ ವಿರೋಧ ಪಕ್ಷದ ನಾಯಕರಿಗೂ ಮಾಹಿತಿ ಇರುತ್ತದೆ ಎಂದರು.

ಸಿದ್ದರಾಮಯ್ಯ ಅವರು ಮೈಸೂರಿನ ತೋಟದ ಮನೆಯಲ್ಲಿ ಕುಳಿತು  ಮಾತನಾಡುವುದಲ್ಲ.  ವಿಧಾನಸೌಧಕ್ಕೆ ಬಂದು ದಾಖಲೆ ಪರಿಶೀಲನೆ ನಡೆಸಲಿ.ಕೋವಿಡ್‌ಗೆ ಸಂಬಂಧಿಸಿದಂತೆ ಯಾವುದೇ ದಾಖಲೆಯನ್ನು ಸಾರ್ವಜನಿಕರ ಮುಂದೆ ಇಡಲು  ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.

ಕಳೆದ ನಾಲ್ಕೈದು  ತಿಂಗಳಲ್ಲಿ ರಾಜ್ಯ ಸರ್ಕಾರ ಖರ್ಚು ಮಾಡಿರುವುದು  554 ಕೋಟಿ.  ಆದರೆ, ಸಿದ್ದರಾಮಯ್ಯ ಅವರು 2,300 ಕೋಟಿ ಅವ್ಯವಹಾರ ನಡೆದಿದೆ ಎಂದು ಹೇಳಿದ್ದಾರೆ ಎಂದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *