ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯು ಕೋವಿಡ್-19 ನಿಯಂತ್ರಣದಲ್ಲಿ ಉತ್ತಮ ಸ್ಥಿತಿಯಲ್ಲಿದ್ದು, ಸಾವಿನ ಪ್ರಮಾಣ ಇನ್ನಷ್ಟು ಕಡಿಮೆಗೊಳಿಸಬೇಕಿದೆ ಎಂದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸೂಚಿಸಿದರು.
ಮುಖ್ಯಮಂತ್ರಿಗಳ ವಿಡಿಯೋ ಸಂವಾದಕ್ಕೂ ಮುನ್ನ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ನೂರು ಪಾಸಿಟಿವ್ ಪ್ರಕರಣಗಳಿಗೆ ಒಂದು ಸಾವು ಸಂಭವಿಸಬೇಕು. ಆದರೆ, ಜಿಲ್ಲೆಯಲ್ಲಿ ಸಾವಿನ ಪ್ರಮಾಣ ಹೆಚ್ಚಿದೆ. ಇದನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಅನುಸರಿಸಬೇಕು ಎಂದು ಹೇಳಿದರು.
ಕಂಟೈನ್ಮೆಂಟ್ ಝೋನ್, ಬಫರ್ ಝೋನ್ ಸೇರಿ ಎಲ್ಲ ಪ್ರದೇಶಗಳಲ್ಲಿ ಹೆಚ್ಚಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷಿಸುವ ಮೂಲಕ ಪಾಸಿಟಿವ್ ಇರುವವರನ್ನು ಬೇಗ ಪತ್ತೆ ಹಚ್ಚಿ ಚಿಕಿತ್ಸೆ ನೀಡಬೇಕು. ಸೋಂಕು ಲಕ್ಷಣ ಇರುವವರು ತಡಮಾಡದೆ ಆಸ್ವತ್ರೆಗೆ ಬಂದರೆ ಶೀಘ್ರ ಗುಣಪಡಿಸಲು ನೆರವಾಗುತ್ತೆದೆ ಎಂದರು
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಮಾತನಾಡಿ, ಪಾಸಿಟಿವ್ ಬಂದ ತಕ್ಷಣ ಮೂರು ಗಂಟೆಗಳ ಒಳಗೆ ಬ್ಯಾರಿಕೇಡ್ ಹಾಕಿ ಸೀಲ್ಡೌನ್ ಮಾಡಬೇಕು. ಸೋಂಕಿತರ ಮನೆ, ಬೀಗಗಳಿಗೆ ಬ್ಯಾರಿಕೇಡ್ ಹಾಕಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಸಿಇಒ ಪದ್ಮ ಬಸವಂತಪ್ಪ ಮಾತನಾಡಿ, ಹೊರ ಜಿಲ್ಲೆಗಳಿಂದ ಬಂದಿರುವ 1,400 ಜನರ ಪಟ್ಟಿ ಮಾಡಲಾಗಿದೆ.ಅವರನ್ನು ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ. ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.
ಉಪ ವಿಭಾಗಾಧಿಕಾರಿ ಮಮತಾ ಹೊಸಗೌಡರ್, ಕೋವಿಡ್ ನೋಡಲ್ ಅಧಿಕಾರಿ ಪ್ರಮೋದ್ ನಾಯಕ್, ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ಡಿಎಚ್ಒ ರಾಘವೇಂದ್ರ ಸ್ವಾಮಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಿ.ಡಿ. ರಾಘವನ್, ಡಾ ನಟರಾಜ್, ಡಾ.ಕಾಳಪ್ಪ ಇದ್ದರು.



