ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿ ಬಗ್ಗೆ ಇಂದು ಯಾವುದೇ ನಿರ್ಧಾರ ತಗೆದುಕೊಂಡಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು .
ಮುಖ್ಯಮಂತ್ರಿ ಜೊತೆ ವಿಡಿಯೋ ಸಂವಾದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಗತ್ಯವಿದ್ದರೆ ಲಾಕ್ ಡೌನ್ ಹೇರಲು ಸಿಎಂ ಸೂಚನೆ ನೀಡಿದ್ದಾರೆ. ಅದಕ್ಕೂ ಮುನ್ನ ಸಂಸದರು, ಜಿಲ್ಲಾ ಉಸ್ತುವಾರಿ ಸಚಿವರು, ಎಲ್ಲಾ ಜನಪ್ರತಿನಿಧಿಗಳ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲು ಹೇಳಿದ್ದಾರೆ ಎಂದರು.
https://www.facebook.com/permalink.php?story_fbid=280755386684677&id=105586904201527
ಲಾಕ್ ಡೌನ್ ಎಷ್ಟೇ ಹೇರಿದರು ಜನರು ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು. ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು, ಮನೆಯಿಂದ ಅನವಶ್ಯಕವಾಗಿ ಹೊರಗೆ ಬರದಂತೆ ಎಚ್ಚರಿಕೆ ವಹಿಸಬೇಕು. ನೀವು ನಿಮ್ಮ ಆರೋಗ್ಯ ರಕ್ಷಣೆ ಮಾಡಿಕೊಳ್ಳುವುದರ ಮೂಲಕ ನಮ್ಮ ಜೊತೆ ಕೈ ಜೋಡಿಸಿ ಎಂದು ಮನವಿ ಮಾಡಿದರು. ಕಂಟೈನ್ ಮೆಂಟ್ ಜೋನ್ ಗಳಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದ್ದು, ಹೆಚ್ಚಿನ ಜನರನ್ನು ತಪಾಸಣೆಗೆ ಒಳಪಡಿಸಲಾಗುವುದು ಎಂದು ತಿಳಿಸಿದರು.



