ಜೈಪುರ: ತಮ್ಮದೇ ಸರ್ಕಾರದ ವಿರುದ್ಧ ಬಂಡಾಯ ಎದ್ದಿರುವ ಸಚಿನ್ ಪೈಲಟ್ ಅವರನ್ನು ಡಿಸಿಎಂ, ಪಿಸಿಸಿ ಮುಖ್ಯಸ್ಥನ ಸ್ಥಾನದಿಂದ ಕಾಂಗ್ರೆಸ್ ವಜಾಗೊಳಿಸಲಾಗಿದೆ.
15 ಶಾಸಕರನ್ನು ದೆಹಲಿಗೆ ಕರೆದೊಯ್ದು ತಮ್ಮದೇ ಸರ್ಕಾರ ವಿರುದ್ಧ ಬಂಡಾಯ ಸಾರಿದ, ಸಚಿನ್ ಪೈಲಟ್ ಅವರ ನಡೆ ರಾಜಸ್ಥಾನ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟಿಗೆ ಸಿಲುಕಿಸಿದೆ. ಈ ಕುರಿತು ಕಾಂಗ್ರೆಸ್ ಪಕ್ಷ ಶಾಸಕಾಂಗ ಪಕ್ಷದ ಸಭೆ ಕರೆದಿತ್ತು. ಈ ಸಭೆಯಲ್ಲಿ ಪಕ್ಷದ 102 ಶಾಸಕರು ಭಾಗವಹಿಸಿದ್ದರು.
ಈ ವೇಳ ಶಸಕರು ಸಚಿನ್ ಪೈಲಟ್ ಅವರನ್ನು ಪಕ್ಷದಿಂದ ಹೊರಹಾಕಬೇಕು ಎಂದು ಆಗ್ರಹಿಸಿದರು. ಹೀಗಾಗಿ ಸಚಿನ್ ಪೈಲಟ್ ಅವರನ್ನು ಉಪಮುಖ್ಯಮಂತ್ರಿ ಹಾಗೂ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಸ್ಥಾನದಿಂದ ವಜಾ ಮಾಡಲಾಗಿದೆ. ಆ ಸ್ಥಾನಕ್ಕೆ ಗೋವಿಂದ್ ಸಿಂಗ್ ದೊತ್ಸಾರ ಅವರನ್ನು ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲ ಹೇಳಿದ್ದಾರೆ.



