Connect with us

Dvgsuddi Kannada | online news portal | Kannada news online

ರಾಜಸ್ಥಾನ ಡಿಸಿಎಂ ಸ್ಥಾನದಿಂದ ಸಚಿನ್‌ ಪೈಲಟ್‌ ವಜಾ

ಪ್ರಮುಖ ಸುದ್ದಿ

ರಾಜಸ್ಥಾನ ಡಿಸಿಎಂ ಸ್ಥಾನದಿಂದ ಸಚಿನ್‌ ಪೈಲಟ್‌ ವಜಾ

ಜೈಪುರ:  ತಮ್ಮದೇ ಸರ್ಕಾರದ ವಿರುದ್ಧ ಬಂಡಾಯ  ಎದ್ದಿರುವ  ಸಚಿನ್‌ ಪೈಲಟ್‌ ಅವರನ್ನು ಡಿಸಿಎಂ, ಪಿಸಿಸಿ ಮುಖ್ಯಸ್ಥನ ಸ್ಥಾನದಿಂದ ಕಾಂಗ್ರೆಸ್‌ ವಜಾಗೊಳಿಸಲಾಗಿದೆ.

15 ಶಾಸಕರನ್ನು ದೆಹಲಿಗೆ ಕರೆದೊಯ್ದು ತಮ್ಮದೇ ಸರ್ಕಾರ ವಿರುದ್ಧ ಬಂಡಾಯ ಸಾರಿದ, ಸಚಿನ್  ಪೈಲಟ್‌ ಅವರ ನಡೆ ರಾಜಸ್ಥಾನ ಕಾಂಗ್ರೆಸ್‌ ಸರ್ಕಾರವನ್ನು ಇಕ್ಕಟಿಗೆ ಸಿಲುಕಿಸಿದೆ. ಈ ಕುರಿತು ಕಾಂಗ್ರೆಸ್‌ ಪಕ್ಷ ಶಾಸಕಾಂಗ ಪಕ್ಷದ ಸಭೆ ಕರೆದಿತ್ತು. ಈ ಸಭೆಯಲ್ಲಿ ಪಕ್ಷದ 102 ಶಾಸಕರು ಭಾಗವಹಿಸಿದ್ದರು.

ಈ ವೇಳ ಶಸಕರು ಸಚಿನ್‌ ಪೈಲಟ್‌ ಅವರನ್ನು ಪಕ್ಷದಿಂದ ಹೊರಹಾಕಬೇಕು ಎಂದು ಆಗ್ರಹಿಸಿದರು. ಹೀಗಾಗಿ ಸಚಿನ್‌ ಪೈಲಟ್‌ ಅವರನ್ನು ಉಪಮುಖ್ಯಮಂತ್ರಿ ಹಾಗೂ  ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಸ್ಥಾನದಿಂದ ವಜಾ ಮಾಡಲಾಗಿದೆ. ಆ ಸ್ಥಾನಕ್ಕೆ ಗೋವಿಂದ್‌ ಸಿಂಗ್‌ ದೊತ್ಸಾರ ಅವರನ್ನು ನೇಮಕ ಮಾಡಲಾಗಿದೆ ಎಂದು  ಕಾಂಗ್ರೆಸ್‌ ವಕ್ತಾರ ರಣದೀಪ್‌ ಸಿಂಗ್‌ ಸುರ್ಜೆವಾಲ  ಹೇಳಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top