ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಶ್ರೀ ತರಳಬಾಳು ಜಗದ್ಗುರು ರೆಸಿಡೆನ್ಸಿಯಲ್ ಸ್ಕೂಲ್, ಅನುಭವಮಂಟಪ ಶಾಲಾ ಸಂಕೀರ್ಣದ ಶ್ರೀ ತರಳಬಾಳು ಸೆಂಟ್ರಲ್ ಸ್ಕೂಲ್ ಗೆ ಈ ಬಾರಿಯ ಸಿ ಬಿ ಎಸ್ ಇ ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಶೇಕಡಾ100ರಷ್ಟು ಫಲಿತಾಂಶ ಲಭಿಸಿರುತ್ತದೆ.
ಶಾಲೆಯ178 ವಿದ್ಯಾರ್ಥಿಗಳಲ್ಲಿ 30 ವಿದ್ಯಾರ್ಥಿಗಳು A1, 52 ವಿದ್ಯಾರ್ಥಿಗಳು A2, 52 ವಿದ್ಯಾರ್ಥಿಗಳು B1, 31 ವಿದ್ಯಾರ್ಥಿಗಳು B2, ಹಾಗೂ 13 ವಿದ್ಯಾರ್ಥಿಗಳು C1 ಶ್ರೇಣಿಯೊಂದಿಗೆ ಉತ್ತೀರ್ಣರಾಗಿರುತ್ತಾರೆ. ಉತ್ತಮ್ ಹಂಸರಾಜ್ ಶೇ. 97.2 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾನೆ.

ಶಾಲೆಗೆ ಉತ್ತಮ ಫಲಿತಾಂಶವನ್ನು ದೊರಕಿಸಿಕೊಟ್ಟ ವಿದ್ಯಾರ್ಥಿಗಳಿಗೆ ಶ್ರೀ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ, ಶ್ರೀ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ , ಪ್ರಾಂಶುಪಾಲರು ಹಾಗೂ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.



