ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದ ಜನರಿಗೆ ಕೆಲವು ಪ್ರಮುಖ ವಿಷಯಗಳನ್ನು ಗಮನಕ್ಕೆ ತರಲು ಇಂದು ಬೆಳ್ಳಗ್ಗೆ 11 ಗಂಟೆಗೆ ಆನ್ ಲೈನ್ ಲೈವ್ ನಲ್ಲಿ ಬರಲಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮ್ಯ ಅವರು ಟ್ವೀಟ್ ಮಾಡಿದ್ದಾರೆ.
ಈ ಸಂವಾದ ಫೇಸ್ ಬುಕ್ ಹಾಗೂ ಟ್ವಿಟ್ಟರ್ನಲ್ಲಿ ನೇರಪ್ರಸಾರವಾಗಲಿದೆ. ಸಿದ್ದರಾಮಯ್ಯ ಅವರು ಪ್ರಮುಖ ವಿಷಯ ಕುರಿತು ಸುದ್ದಿಗೋಷ್ಠಿ ನಡೆಯಲಿದೆ ಎಂದು ಹೇಳಿರುವುದು ಸಹಜವಾಗಿ ಎಲ್ಲರ ಗಮನ ಸೆಳೆದಿದೆ.
ಕೋವಿಡ್–19 ಕಿಟ್ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಅವರು ಆರೋಪ ಮಾಡಿದ್ದರು. ಹೀಗಾಗಿ ಈ ಸುದ್ದಿಗೋಷ್ಠಿ ಮಹತ್ವ ಪಡೆದುಕೊಂಡಿದೆ.
ನಾಳೆ ಬೆಳಿಗ್ಗೆ 11 ಗಂಟೆಗೆ ಮಾಧ್ಯಮದ ಮೂಲಕ ಕೆಲವು ಪ್ರಮುಖ ವಿಚಾರಗಳನ್ನು ರಾಜ್ಯದ ಜನತೆಯ ಗಮನಕ್ಕೆ ತರಲಿದ್ದೇನೆ. ಈ ಪತ್ರಿಕಾ ಸಂವಾದ ಫೇಸ್ ಬುಕ್ ಹಾಗೂ ಟ್ವಿಟ್ಟರ್ನಲ್ಲಿ ನೇರಪ್ರಸಾರವಾಗಲಿದೆ.
ನಿಮ್ಮ ಪ್ರತಿಕ್ರಿಯೆಗೆ ಸ್ವಾಗತ. pic.twitter.com/CgZqMmVuoR— Siddaramaiah (@siddaramaiah) July 15, 2020



