Connect with us

Dvgsuddi Kannada | online news portal | Kannada news online

ರಾಜ್ಯದಾದ್ಯಂತ ವ್ಯಾಪಕ ಮಳೆ; ಎಲ್ಲಿ, ಎಷ್ಟು ಮಳೆ..?

ಪ್ರಮುಖ ಸುದ್ದಿ

ರಾಜ್ಯದಾದ್ಯಂತ ವ್ಯಾಪಕ ಮಳೆ; ಎಲ್ಲಿ, ಎಷ್ಟು ಮಳೆ..?

ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಮುಂಗಾರು ತೀವ್ರಗೊಂಡಿದ್ದು, ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುತ್ತಿದೆ. ಇಂದು, ನಾಳೆ  ಭಾರೀ ಮಳೆ ಸುರಿಯಲಿದೆ ಎಂದು  ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆದೆ. ಹೀಗಾಗಿ ಅಲ್ಲಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ  ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಜು.21ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಮಳೆ ಪ್ರಮಾಣ ತಗ್ಗಿದ್ದು, ಕೆಲವೆಡೆ ಸಾಧಾರಣ ಮಳೆಯಾಗಬಹುದು.

ದಕ್ಷಿಣ ಕನ್ನಡ ಜಿಲ್ಲೆಯ ಮಾಣಿಯಲ್ಲಿ ಗರಿಷ್ಠ 15 ಸೆಂ.ಮೀ ಮಳೆಯಾಗಿದೆ. ಕೊಲ್ಲೂರು 14, ಆಗುಂಬೆ 13, ಉಡುಪಿ 11, ಕದ್ರಾ 10, ಕಾರವಾರ, ಅಂಕೋಲಾ, ಕುಂದಾಪುರ, ಮೂಡುಬಿದರೆ, ಬೆಳ್ತಂಗಡಿ 9, ಮಂಗಳೂರು, ಹೊಸನಗರ, ಭಾಗಮಂಡಲ 8, ಉಪ್ಪಿನಂಗಡಿ, ಭಟ್ಕಳ 7, ಸಾಗರ, ತೀರ್ಥಹಳ್ಳಿ, ಮಡಿಕೇರಿ 3, ಬೆಳಗಾವಿ, ಸಕಲೇಶಪುರ, ಹಾಸನ, ಸೊರಬ 2, ನಿಪ್ಪಾಣಿ, ಬೈಲಹೊಂಗಲ, ಚಿಕ್ಕಮಗಳೂರು, ಎಚ್.ಡಿ.ಕೋಟೆ ಹಾಗೂ ಮಾಗಡಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top