ಡಿವಿಜಿಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿರುವ ಅಕ್ರಮ ಕಸಾಯಿಖಾನೆ ಮುಚ್ಚುವಂತೆ ಆಗ್ರಹಿಸಿ ನಗರದ ಜಯದೇವ ಸರ್ಕಲ್ ಬಳಿ ಶ್ರೀ ರಾಮ ಸೇನೆ ಕಾರ್ಯಕರ್ತರು ಪ್ರತಿಭಟಿಸಿದರು.
ಜಿಲ್ಲೆಯಲ್ಲಿ ಅಕ್ರಮ ಗೋ ಸಾಗಾಣಿಕೆ ನಡೆಯುತ್ತಿದೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರು ಸರಿಯಾದ ಕ್ರಮ ಕೈಗೊಳ್ಳುತ್ತಿಲ್ಲ. ಇದೇ ರೀತಿಯಾದರೆ ಮುಂದಿನ ದಿನಗಳಲ್ಲಿ ಜಿಲ್ಲಾ ಬಂದ್ ಗೆ ಕರೆ ನೀಡಬೇಕಾಗುತ್ತದೆ ಎಂದು ಪ್ರತಿಭಟನಕಾರರು ಎಚ್ಚರಿಕೆ ನೀಡಿದರು.
ದೇಶದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆಗಳಿಗೆ ಕಡಿವಾಣ ಬಿದ್ದಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗ ಮನವಿ ನೀಡಿದರೂ ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾಗಿ ರಾಜ್ಯ ಮುಖ್ಯಮಂತ್ರಿ ಮತ್ತು ಗೃಹ ಮಂತ್ರಿಗಳಿಗೆ ಉಪ ವಿಭಾಗ ಅಧಿಕಾರಿ ಮೂಲಕ ಮನವಿ ಸಲ್ಲಿಸುತ್ತೇವೆ. ಈ ಕೂಡಲೇ ಕ್ರಮ ಕೈಗೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಉಗ್ರವಾಗಿ ಹೋರಾಟ ಮಾಡುತ್ತೇವೆ ಎಂದು ಶ್ರೀರಾಮ ಸೇನಾ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಸಂಘಟನೆಯ ವಿನೋಧ ರಾಜ್ ಡಿ.ಬಿ, ಅರವಿಂದ , ನೂತನ್ ಆಚಾರ್ಯ, ಕುಮಾರ್ ನಾಯಕ್ , ಅಂಜಿನಿ, ಚಿತ್ರಲಿಂಗ, ಚೇತನ್ , ಕೊಟ್ರೇಶ್,ಅಭಿಷೇಕ್, ತಿಪ್ಪೇಶ್ , ವಿಶ್ವರಾಧ್ಯ ಸೇರಿದಂತೆ ಅನೇಕರು ಭಾಗಿಯಾಗಿದ್ರು.



