ಭೂ ಸುಧಾರಣೆ ಕಾಯ್ದೆಯ ಸುಗ್ರೀವಾಜ್ಞೆ ವಿರುದ್ಧ ಗ್ರಾಮೀಣ ಮಟ್ಟದಿಂದ ಹೋರಾಟ : ಸಿದ್ದರಾಮಯ್ಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಬೆಂಗಳೂರುಭೂಸುಧಾರಣಾ ಕಾಯ್ದೆಗೆ ಸುಗ್ರೀವಾಜ್ಞೆ ವಿರೋಧಿಸಿ  ಸರ್ಕಾರದ ವಿರುದ್ಧ ಗ್ರಾಮೀಣ ಮಟ್ಟದಿಂದ ಹೋರಾಟ ಮಾಡುತ್ತವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಈ ಕಾಯ್ದೆ ಬಗ್ಗೆ ರೈತ ಸಂಘಟನೆ ಜೊತೆ ಸಭೆ ನಡೆಸಿದ ಅವರು, ಕಾಯ್ದೆ  ತಿದ್ದುಪಡಿಗೆ ರೈತ ಸಂಘಟನೆಗಳ ಮುಖಂಡರು ವಿರೋಧವಿದೆ. ಈ ಬಗ್ಗೆ ಗ್ರಾಮೀಣ ಮಟ್ಟದಿಂದ ಹೋರಾಟ ಮಾಡುಬೇಕಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಗ್ರಾಮೀಣ ಮಟ್ಟದಿಂದ ಹೋರಾಟ ರೂಪಿಸುತ್ತೇವೆ. ಕಾಯ್ದೆ ತಿದ್ದುಪಡಿ ಮೂಲಕ ಸರ್ಕಾರ, ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ಈ ತಿದ್ದುಪಡಿಯಿಂದ ರೈತರು ಬೀದಿಪಾಲು ಆಗಲಿದ್ದಾರೆ ಎಂದರು.

ರಾಜ್ಯ ಸರ್ಕಾರ ತಂದಿರುವ ತಿದ್ದುಪಡಿ ರೈತ ವಿರೋಧಿ. ರೈತರು, ಕೃಷಿ ಕಾರ್ಮಿಕರಿಗೆ ಇದೊಂದು ಮರಣಶಾಸನ. ಕೂಡಲೇ ತಿದ್ದುಪಡಿ ವಾಪಸ್ ಪಡೆಯಬೇಕು. ಈ ತಿದ್ದುಪಡಿ ರೈತರ ಭೂಮಿಯನ್ನು ಕೊಳ್ಳಲು ಶ್ರೀಮಂತರಿಗೆ ಅವಕಾಶ ಮಾಡಿಕೊಟ್ಟಿದೆ. ಹೀಗಾಗಿ ರೈತ ಮುಖಂಡರು ನಮ್ಮ ಹೋರಾಟಕ್ಕೆ ಬೆಂಬಲ ನೀಡಬೇಕು ಮನವಿ ಮಾಡಿದರು.

ರೈತ ಮುಖಂಡರಾದ ಕೋಡಿಹಳ್ಳಿ ಚಂದ್ರಶೇಖರ್, ಬಸವರಾಜಪ್ಪ, ವೀರಸಂಗಯ್ಯ, ಚಾಮರಸಮಾಲಿಪಾಟೀಲ, ಬಡಿಗೇಪುರ ನಾಗೇಂದ್ರ ಮತ್ತಿತರರು ಸಭೆಯಲ್ಲಿ ಭಾಗಿಯಾಗಿದ್ದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *