Connect with us

Dvgsuddi Kannada | online news portal | Kannada news online

ಟ್ಯಾಂಕರ್ ಖರೀದಿಸಿ ಶೇ. 50, 90 ರಷ್ಟು ಸಹಾಯಧನ ಪಡೆಯಿರಿ

ದಾವಣಗೆರೆ

ಟ್ಯಾಂಕರ್ ಖರೀದಿಸಿ ಶೇ. 50, 90 ರಷ್ಟು ಸಹಾಯಧನ ಪಡೆಯಿರಿ

ಡಿವಿಜಿ ಸುದ್ದಿ.ಕಾಂ, ದಾವಣಗೆರೆ: 2019-20ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ಬೆಳೆಗಳಿಗೆ ಬೇಸಿಗೆಯಲ್ಲಿ ನೀರಿನ ಅಭಾವ ತಡೆಗಟ್ಟಲು ನೀರಿನ ಟ್ಯಾಂಕರ್‍ ಖರೀದಿಸಿದ ಸಾಮಾನ್ಯ ವರ್ಗಕ್ಕೆ ಸೇರಿದ  ರೈರಿಗೆ  ಶೇ.50 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರಿದ ರೈತರಿಗೆ ಶೇ.90 ರಷ್ಟು ಸಹಾಯಧ ನೀಡಲಿದೆ.

2019-20ನೇ ಸಾಲಿನ ನೀರಿನ ಟ್ಯಾಂಕರ್‍ ಗೆ  ಸಹಾಯಧನ ನೀಡಲು ಅನುಷ್ಠಾನ ಮಾರ್ಗಸೂಚಿಯಲ್ಲಿ ನೀರಿನ ಟ್ಯಾಂಕರ್‍ ನ್ನು  ಆರ್‍ ಟಿಒನಿಂದ ಕಡ್ಡಾಯವಾಗಿ ನೋಂದಣಿ ಮಾಡಿಸಬೇಕಾಗಿರುತ್ತದೆ.  ಈಗಾಗಲೇ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಿರುವ ರೈತರು ಟ್ಯಾಂಕರ್ ನ್ನು ಅನುಮೋದಿತ ಸಂಸ್ಥೆಗಳಿಂದ ಖರೀದಿಸಿದ ನಂತರ ಆರ್‍ ಟಿಒ  ನೋಂದಣಿ ಮಾಡಿಸಿಕೊಂಡ ನಂತರವೇ ನಿಗದಿಪಡಿಸಿದ ನಿಯಮಾನುಸಾರ ಸಹಾಯಧನಕ್ಕಾಗಿ ಪರಿಗಣಿಸಲಾಗುವುದು.

ಅರ್ಜಿಗಳನ್ನು ಸಲ್ಲಿಸಿರುವ ಆಸಕ್ತ ರೈತರುಗಳು ಟ್ಯಾಂಕರ್‍ ನ್ನು ಆರ್‍ ಟಿ ಒ ನೋಂದಣಿ   ಮಾಡಿಸಿಕೊಳ್ಳುವ ಬಗ್ಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಖಚಿತಪಡಿಸಿದಲ್ಲಿ ಮತ್ತೊಮ್ಮೆ ಜೇಷ್ಠತೆಯನ್ನು ನಿರ್ವಹಿಸಲು ಸಹಕಾರಿಯಾಗುತ್ತದೆ. ಆದ್ದರಿಂದ ಕೊಡಲೇ ಕಚೇರಿಗೆ ಆಗಮಿಸಿ ತಮ್ಮ ಗ್ರಾಮಕ್ಕೆ ಸಂಬಂಧಿಸಿದ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿಯನ್ನು ಸಂಪರ್ಕಿಸಬೇಕೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಲಕ್ಷ್ಮೀಕಾಂತ್ ಬೊಮ್ಮನ್ನರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top