ಗದ್ದೆಯಂತಾದ ಅಣಜಿಗೆರೆ ರಸ್ತೆ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಪರದಾಟ..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಹರಪನಹಳ್ಳಿ:  ತಾಲ್ಲೂಕಿನ ಉಚ್ಚoಗಿದುರ್ಗದ ಅಣಜಿಗೆರೆ ಮಾರ್ಗದ ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿ ಬಿದ್ದಿದ್ದು,  ಭಾರೀ ಮಳೆಯ ಪರಿಣಾಮ ರಸ್ತೆ ಗದ್ದೆಯಂತಾಗಿದೆ.

ರಸ್ತೆಯಲ್ಲಿ ದಿನ ನಿತ್ಯ ಸಾವಿರಾರು ಪ್ರಯಾಣಿಕರು  ಓಡಾಡುತ್ತಿದ್ದು, ತುಂಬಾ ತೊಂದರೆಯಾಗುತ್ತಿದೆ. ಈ ಬಗ್ಗೆ ಅನೇಕ ಬಾರಿ ದೂರು ನೀಡಿದ್ದರೂ, ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ.

anajigere road 2

ಈ ಗುಂಡಿಗಳಲ್ಲಿ ಅನೇಕರು  ಬಿದ್ದು ಕೈ ಕಾಲು ಮುರಿದು ಕೊಂಡಿದ್ದಾರೆ ಅಲ್ಲದೆ ಪ್ರತಿ ಗುರುವಾರ ಗ್ರಾಮದಲ್ಲಿ ಸಂತೆ ನಡೆಯುತ್ತದೆ.  ಸಂತೆಗೆ ಸುತ್ತ ಮುತ್ತಲಿನ ಸಾವಿರಾರು ಜನರು ಮಹಿಳೆಯರು, ವೃದ್ದರು, ಮಕ್ಕಳು ನಡೆದುಕೊಂಡು ಬರುತ್ತಾರೆ.  ದಾರಿಯಲ್ಲಿನ ಗುಂಡಿಗಳು ಕಾಣದೆ ಬಿದ್ದು ಕೈ-ಕಾಲುಗಳನ್ನು ಮುರಿದುಕೊಂಡಿದ್ದಾರೆ.

ಈ ಕುರಿತು ಗ್ರಾಮಸ್ಥರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಲೋಕೋಪಯೋಗಿ ಇಲಾಖೆಗೆ ಪತ್ರವನ್ನು ಬರೆದು ಹಲವು ದಿನಗಳಾದರೂ ಗುಂಡಿ ಮುಚ್ಚಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿದ ಹರಪನಹಳ್ಳಿ ಕಾರ್ಯಪಾಲಕ ಅಭಿಯಂತರ ಲಿಂಗಪ್ಪ, ಒಂದು ವಾರದೊಳಗೆ ಗುಂಡಿಗಳನ್ನು ಮುಚ್ಚುವ ಭರವಸೆ ನೀಡಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *