ಡಿವಿಜಿ ಸುದ್ದಿ, ಮೈಸೂರು: ಸಾ.ರಾ.ಮಹೇಶ್ ನನಗೆ ಸಾಟಿಯಲ್ಲ, ಪ್ರತಿಸ್ಪರ್ಧಿಯೂ ಅಲ್ಲ. ಆತನ ಪ್ರಶ್ನೆಗಳಿಗೆ ಉತ್ತರ ಕೊಡುವ ಅಗತ್ಯವಿಲ್ಲ’ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ.
ನನ್ನ ನಾಮನಿರ್ದೇಶನವನ್ನು ಪ್ರಶ್ನಿಸಿ ರಾಜ್ಯಪಾಲರಿಗೆ ಪತ್ರ ಬರೆದಿದ್ದರೆ ನನಗೆ ಸಮಸ್ಯೆ ಇಲ್ಲ. ಕಾನೂನು ತೊಡಕಿದ್ದರೆ ರಾಜ್ಯಪಾಲರೇ ತಿಳಿಸುತ್ತಾರೆ ಎಂದರು.
ವಿಶ್ವನಾಥ್ ಅವರನ್ನು ಸಾಹಿತ್ಯ ಕೋಟಾದಡಿ ವಿಧಾನ ಪರಿಷತ್ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿರುವುದು ಕಾನೂನುಬಾಹಿರ. ನಾಮನಿರ್ದೇಶನದ ಆದೇಶ ರದ್ದುಗೊಳಿಸಬೇಕು ಎಂದು ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದರು.



