Connect with us

Dvgsuddi Kannada | online news portal | Kannada news online

ನರ್ಸ್ ಗಳಿಗೆ ಯಾಕಿಲ್ಲ ಅಪಾಯದ ಭತ್ಯೆ : ರಾಘು ದೊಡ್ಡಮನಿ

ಪ್ರಮುಖ ಸುದ್ದಿ

ನರ್ಸ್ ಗಳಿಗೆ ಯಾಕಿಲ್ಲ ಅಪಾಯದ ಭತ್ಯೆ : ರಾಘು ದೊಡ್ಡಮನಿ

ಡಿವಿಜಿ ಸುದ್ದಿ, ದಾವಣಗೆರೆ: ಕಳೆದ ನಾಲ್ಕು ತಿಂಗಳಿಂದ ಯಾವುದೇ ರಜೆಗಳನ್ನು ಪಡೆಯದೇ ಲಾಕ್ ಡೌನ್, ಸರ್ಕಾರಿ ರಜೆ, ಭಾನುವಾರದಲ್ಲೂ ಕರ್ತವ್ಯ ನಿರ್ವಹಿಸಿದ ನರ್ಸ್ ಸಿಬ್ಬಂದಿಗಳಿಗೆ ಅಪಾಯದ ಭತ್ಯೆ( risk allowances) ಯಾಕಿಲ್ಲ ಎಂದು ಕೆಪಿಸಿಸಿ ಸಾಮಾಜಿಕ ಜಾಲತಾಣ ಕಾರ್ಯದರ್ಶಿ ರಾಘು ದೊಡ್ಡಮನಿ ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ, ಆರೋಗ್ಯ ಸಚಿವ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಿಗೆ ಪತ್ರ ಬರೆದಿರುವ ಅವರು, ಆರೋಗ್ಯ ಇಲಾಖೆ ನರ್ಸ್ ಸೇವೆಗಳನ್ನು ಗುರುತಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕೋವಿಡ್ ನಿಯಂತ್ರಣ ದಿನಗಳಲ್ಲಿ ವೈದ್ಯರುಗಳಿಗೆ ಕೇಂದ್ರದ ಸಮಾನ ವೇತನ ನೀಡಲು ಒಪ್ಪಿದ ಸರ್ಕಾರ ನಂತರದ ದಿನಗಳಲ್ಲಿ ವೈದ್ಯಕೀಯ ವಿದ್ಯಾರ್ಥಿಗಳ ಸ್ಟೈ ಫಂಡ್ ಅನ್ನು ಏರಿಸಿತು, ಕೆಲವೇ ದಿನಗಳ ಹಿಂದೆ ಕೋವಿಡ್ ರೋಗಿಗಳ ಆರೈಕೆ ನೀಡುವ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ಗ್ರೂಪ್ ಡಿ ನೌಕರರಿಗೂ ತಿಂಗಳಿಗೆ ತಲಾ 10000 ರೂಪಾಯಿಗಳ ಭತ್ಯೆಯನ್ನು ನೀಡುವುದಾಗಿ ಘೋಷಿಸಿರುವ ಸರ್ಕಾರದ ನಡೆ ನಿಜಕ್ಕೂ ಅಭಿನಂದನೀಯ. ಆದರೆ, ರೋಗಿಗಳ ಆರೈಕೆಯಲ್ಲಿ ನೇರವಾಗಿ ಭಾಗಿಯಾಗುವ ಶುಶ್ರೂಷಾ ಇಲಾಖಾ ಸಿಬ್ಬಂದಿಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದಿದ್ದಾರೆ.

ಕಳೆದ ನಾಲ್ಕೈದು ತಿಂಗಳಿನಿಂದ ಕುಟುಂಬವನ್ನು ನೋಡದೆ ರಜೆಗಳನ್ನು ಪಡೆಯದೇ ತಮ್ಮ ಪ್ರಾಣವನ್ನೇ ಲೆಕ್ಕಿಸದೇ ಹಗಲಿರುಳು ರೋಗಿಗಳ ಆರೈಕೆಯಲ್ಲಿ ತೊಡಗಿರುವ ಈ ಶುಶ್ರೂಷಾ
ಅಪಾಯ ಭತ್ಯೆಯನ್ನು ನೀಡಿ ಪ್ರೋತ್ಸಾಹಿಸುವುದು ಸರ್ಕಾರದ ಆದ್ಯ ಕರ್ತವ್ಯವೆಂದು ಭಾವಿಸುತ್ತೇನೆ.

ಇದಲ್ಲದೇ ವೈದ್ಯಕೀಯ ಶಿಕ್ಷಣ ಇಲಾಖೆಯ ಅಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶುಶ್ರೂಷಾ ಸಿಬ್ಬಂದಿಗಳಿಗೆ ಸರ್ಕಾರಿ ನೌಕರರು ಪಡೆಯುವ ಎಲ್ಲಾ ರೀತಿಯ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ನೂತನ ಪಿಂಚಣಿ, KGID, GPF ಮುಂತಾದ ಎಲ್ಲಾ ರೀತಿಯ ಸೌಲಭ್ಯಗಳಿಂದ ವಂಚಿತವಾಗಿರುವ ಇವರುಗಳಿಗೆ ಕನಿಷ್ಟ ಅವರ ಕುಟುಂಬಸ್ಥರಿಗೆ ಏನಾದರೂ ಅರೋಗ್ಯದ ಸಮಸ್ಯೆ ಎದುರಾದರೆ ಚಿಕಿತ್ಸೆ ನೀಡಲು ಸರ್ಕಾರಿ ನೌಕರರಿಗೆ ಇರುವ ಆರೋಗ್ಯ ಸಂಜೀವಿನಿ ಎಂಬ ಸೌಭ್ಯಗಳಿಂದ ಕೂಡಾ ವಂಚಿತರಾಗಿದ್ದಾರೆ.

ನಿರ್ದಿಷ್ಟ ವರ್ಗಾವಣೆ ನಿಯಮಗಳು , ಬಡ್ತಿ ನಿಯಮಗಳು ಇಲ್ಲದೇ ಈ ಇಲಾಖೆಯಡಿ ಬರುವ ನೌಕರರು ಪರದಾಡುವಂತಾಗಿದೆ. ಇನ್ನು ವರ್ಷ ಪೂರ್ತಿ ಗೆಜೆಟೆಡ್ ರಜಾ ದಿನಗಳಲ್ಲಿ ಕರ್ತವ್ಯ ನಿರ್ವಹಿಸುವ ಇವರುಗಳಿಗೆ ಪೊಲೀಸ್ ಇಲಾಖೆ ನೌಕರರಿಗೆ ನೀಡುವ ಕನಿಷ್ಟ ಒಂದು ತಿಂಗಳ ವೇತನವನ್ನು ನೀಡಬೇಕೆಂಬ ಬೇಡಿಕೆಯು ಹಲವಾರು ವರ್ಷಗಳಿಂದ ಬೇಡಿಕೆಯಾಗಿಯೇ ಉಳಿದಿದೆ. ಇಷ್ಟೆಲ್ಲಾ ಸಮಸ್ಯೆಗಳನ್ನು ಎದುರಿಸುತ್ತಿದ್ದರು ಕೂಡಾ ರೋಗಿಗಳ ಆರೈಕೆಯಲ್ಲಿ ಯಾವುದೇ ರೀತಿಯಲ್ಲಿ ತೊಡಕಾಗದಂತೆ ಸೇವೆ ಸಲ್ಲಿಸುತ್ತಿರುವ ರಾಜ್ಯದ ಈ ನರ್ಸಿಂಗ್ ಸಿಬ್ಬಂದಿಗಳಿಗೆ ಇನ್ನಾದರೂ ನಮ್ಮ ರಾಜ್ಯ ಸರ್ಕಾರ ಎಚ್ಚೆತ್ತು ಈ ಎಲ್ಲಾ ನ್ಯಾಯಯುತ ಬೇಡಿಕೆಗಳನ್ನು ಮತ್ತು ಸಮಸ್ಯೆಗಳನ್ನು ಈ ಕೂಡಲೇ ಈಡೇರಿಸಬೇಕೆಂದು ಒತ್ತಾಯಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top