Connect with us

Dvgsuddi Kannada | online news portal | Kannada news online

ಸಿಎಂ ಯಡಿಯೂರಪ್ಪ 10  ದಿನ ಕಾಲ ಆಸ್ಪತ್ರೆಯಲ್ಲಿ ಇರಬೇಕಿದೆ: ಡಾ. ಕೆ. ಸುಧಾಕರ್

ಪ್ರಮುಖ ಸುದ್ದಿ

ಸಿಎಂ ಯಡಿಯೂರಪ್ಪ 10  ದಿನ ಕಾಲ ಆಸ್ಪತ್ರೆಯಲ್ಲಿ ಇರಬೇಕಿದೆ: ಡಾ. ಕೆ. ಸುಧಾಕರ್

ಡಿವಿಜಿ ಸುದ್ದಿ, ಬೆಂಗಳೂರು: ಸಿಎಂ ಯಡಿಯೂರಪ್ಪ ಅವರು 8ರಿಂದ 10 ದಿನ ಕಾಲ  ಆಸ್ಪತ್ರೆಯಲ್ಲಿ ಇರಬೇಕಾಗಬಹುದು ಎಂದು  ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು.

ಕಳೆದ ಮೂರ್ನಾಲ್ಕು ದಿನಗಳಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರನ್ನು ಭೇಟಿ ಮಾಡಿದವರೆಲ್ಲರೂ ಕ್ವಾರಂಟೈನ್ ಗೆ ಒಳಗಾಗಬೇಕಾಗಿದೆ. ಕಳೆದ ವಾರದಿಂದ ಹಲವು ಕಾರ್ಯಕ್ರಮಗಳಲ್ಲಿ ಯಡಿಯೂರಪ್ಪನವರ ಜೊತೆ ಸಂಪರ್ಕಕ್ಕೆ ಬಂದವರನ್ನು ಪತ್ತೆ ಹಚ್ಚಲಾಗುತ್ತಿದೆ.  ಮುಖ್ಯಮಂತ್ರಿಗಳಿಗೆ ಸ್ವಲ್ಪ ಕಫ ಇದೆ, ಬೇರೆ ಹೃದಯದ ಸಮಸ್ಯೆಯೇನು ಕಂಡುಬಂದಿಲ್ಲ ಎಂದಿದ್ದಾರೆ.

sudhakr

ಕಳೆದ ಮೂರ್ನಾಲ್ಕು ದಿನಗಳಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದವರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಬೇಕು. ಅಲ್ಲಿಯವರೆಗೆ ಸ್ವಯಂ ಕ್ವಾರಂಟೈನ್ ಗೆ ಒಳಗಾಗುವುದು ಉತ್ತಮ. ಇತ್ತೀಚೆಗೆ ಕಾರ್ಯಕ್ರಮಗಳಲ್ಲಿ ಅವರ ಸಂಪರ್ಕಕ್ಕೆ ಬಂದವರು ಕೂಡ ಪ್ರತ್ಯೇಕವಾಗಿ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಇತ್ತೀಚೆಗೆ ಮುಖ್ಯಮಂತ್ರಿಗಳು ರಾಜ್ಯಪಾಲ ವಜುಭಾಯಿ ವಾಲಾ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದು, ಅವರು ಸಹ ಕೊರೋನಾ ಪರೀಕ್ಷೆ ಮಾಡಿಸಿಕೊಂಡು ಕ್ವಾರಂಟೈನ್ ಆದರೆ ಉತ್ತಮ ಎಂದು ಸಚಿವ ಸುಧಾಕರ್ ಹೇಳಿದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top