Connect with us

Dvgsuddi Kannada | online news portal | Kannada news online

ಮೀನಿನ ಕೃಷಿ ಮಾಡ್ಬೇಕು ಅಂತ ಇದ್ದೀರಾ ..? ಇಲ್ಲಿದೆ ಸುವರ್ಣಾವಕಾಶ..!

ದಾವಣಗೆರೆ

ಮೀನಿನ ಕೃಷಿ ಮಾಡ್ಬೇಕು ಅಂತ ಇದ್ದೀರಾ ..? ಇಲ್ಲಿದೆ ಸುವರ್ಣಾವಕಾಶ..!

ಡಿವಿಜಿ ಸುದ್ದಿ, ದಾವಣಗೆರೆ:  ಜಿಲ್ಲಾ ಮೀನುಗಾರಿಕೆ ಇಲಾಖೆ ವತಿಯಿಂದ 2020-21 ನೇ ಸಾಲಿನ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಸಹಾಯಧನಕ್ಕಾಗಿ ಜಿಲ್ಲೆಯ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮೀನು ಕೃಷಿ ಕೊಳಗಳ ನಿರ್ಮಾಣ, ಬಯೋ ಫ್ಲಾಕ್ಸ್ ಕೊಳ ನಿರ್ಮಾಣ, ಮೀನುಮರಿ ಉತ್ಪಾದನೆ ಹಾಗೂ ಪಾಲನಾ ಕೇಂದ್ರಗಳ ಸ್ಥಾಪನೆ, ಕ್ರೀಡಾ ಮೀನುಗಾರಿಕೆ, ಶೈತ್ಯೀಕರಿಸಿದ ವಾಹನಗಳು, ಆರ್‍ಎಎಸ್ ಘಟಕ ಸ್ಥಾಪನೆ, ಶೈತ್ಯಾಗಾರ, ಮಂಜುಗಡ್ಡೆ ಸ್ಥಾವರ ನಿರ್ಮಿಸುವುದು, ಅಲಂಕಾರಿಕ ಮೀನು ಉತ್ಪಾದಕ ಘಟಕ ಉಪಯೋಜನೆಗಳನ್ನು ಪ್ರಾರಂಭಿಸಲು ಸಾಮಾನ್ಯ ಫಲಾನುಭವಿಗಳಿಗೆ ಶೇ.40, ಪ.ಜಾತಿ/ಪ.ಪಂಗಡ/ ಮಹಿಳಾ ಫಲಾನುಭವಿಗಳಿಗೆ ಶೇ.60 ರಷ್ಟು ಸಹಾಯಧನ ನೀಡಲಾಗುವುದು.

ಅರ್ಜಿ ಸಲ್ಲಿಸಲು ಆ.31 ಕೊನೆಯ ದಿನವಾಗಿರುತ್ತದೆ. ಆಸಕ್ತ ಫಲಾನುಭವಿಗಳು ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು ಸಲ್ಲಿಸಬಹುದಾಗಿದೆ.  ಅರ್ಹ ಮೀನುಗಾರರೆಲ್ಲ ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕೆಂದು ಮೀನುಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಗಣೇಶ್.ಆರ್  ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top