Connect with us

Dvgsuddi Kannada | online news portal | Kannada news online

ರಾಮ-ಲಕ್ಷ್ಮಣನ ವಿಗ್ರಹಕ್ಕೆ ಮೀಸೆ ಇರಲೇ ಬೇಕು; ಸಂಭಾಜಿ ಭಿಡೆ

ರಾಷ್ಟ್ರ ಸುದ್ದಿ

ರಾಮ-ಲಕ್ಷ್ಮಣನ ವಿಗ್ರಹಕ್ಕೆ ಮೀಸೆ ಇರಲೇ ಬೇಕು; ಸಂಭಾಜಿ ಭಿಡೆ

ಪುಣೆ: ಅಯೋಧ್ಯೆಯಲ್ಲಿ ನಿರ್ಮಾಣ ಮಾಡುವ ರಾಮ-ಲಕ್ಷ್ಮಣನ ವಿಗ್ರಹಕ್ಕೆ ಮೀಸೆ ಇರಲೇಬೇಕು ಎಂದು ಹಿಂದುತ್ವ ಪ್ರತಿಪಾದಕ ಸಂಭಾಜಿ ಭಿಡೆ ಆಗ್ರಹಿಸಿದ್ದಾರೆ. ಇದು  ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ನಾಳೆ ಉತ್ತರಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಶಿಲಾನ್ಯಾಸ ನಡೆಯಲಿದೆ. ಈ ಸಂಬಂಧ ಈಗಾಗಲೇ ಶ್ರೀರಾಮಂದಿರ ಟ್ರಸ್ಟ್ ನ ಗೋವಿಂದಗಿರಿ ಜೀ ಮಹಾರಾಜ್ ಜೊತೆ ಮಾತನಾಡಿ, ನೀವು ಸ್ಥಾಪಿಸುವ ರಾಮ ಹಾಗೂ ಲಕ್ಷ್ಣಣ ಪ್ರತಿಮೆಗಳಿಗೆ ಮೀಸೆ ಇರಬೇಕು. ಒಂದು ವೇಳೆ ನೀವು ರಾಮ-ಲಕ್ಷ್ಮಣ ವಿಗ್ರಹಗಳಿಗೆ ಮೀಸೆ ಇಟ್ಟಿಲ್ಲವೆಂದರೆ, ನನ್ನಂತಹ ಭಕ್ತರಿಗೆ ದೇವಾಲಯ ನಿರ್ಮಿಸಿದರೂ ಪ್ರಯೋಜನವಿಲ್ಲದಂತಾಗುತ್ತದೆ ಎಂದಿದ್ದಾರೆ.

rama mandira

ಶ್ರೀರಾಮಮಂದಿರಕ್ಕೆ ಭೂಮಿಪೂಜೆ ಮಾಡುವ ಮೊದಲು ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಬೇಕು. ಆಗಸ್ಟ್ 5ರಂದು ನಡೆಯುವ ಕಾರ್ಯವನ್ನು ದಸರಾ, ದೀಪಾವಳಿ ಹಬ್ಬಗಳಂತೆ ಆಚರಿಸೋಣ ಎಂದು ಇದೇ ವೇಳೆ ಭಿಡೆ ಕರೆ ನೀಡಿದರು.

rama mandira modi

ನಾಳೆ ಮಧ್ಯಾಹ್ನ 12.15ಕ್ಕೆ ಭೂಮಿಪೂಜೆ ಕಾರ್ಯಕ್ರಮ ನಡೆಯಲಿದೆ. ಈ ವೇಳೆ 40 ಕೆಜಿ ತೂಕದ ಬೆಳ್ಳಿಯ ಇಟ್ಟಿಗೆಯನ್ನು ಇಡುವ ಮೂಲಕ ದೇವಾಲಯ ನಿರ್ಮಾಣ ಕಾರ್ಯಕ್ಕೆ ಪ್ರಧಾನಿ ಚಾಲನೆ ನೀಡಲಿದ್ದಾರೆ. 25 ನಿಮಿಷಗಳ ಕಾಲ  ಪೂಜೆ ನಡೆಯಲಿದ್ದು, ಭೂಮಿ ಪೂಜೆ ಬಳಿಕ 45 ನಿಮಿಷ ಮೋದಿ ಭಾಷಣ ಮಾಡಲಿದ್ದಾರೆ. ಇದಾದ ಬಳಿಕ ಸರಯೂ ನದಿ ಬಳಿ ಮೋದಿ ತೆರಳಲಿದ್ದಾರೆ. ಒಟ್ಟು 2 ಗಂಟೆ 15 ನಿಮಿಷಕ್ಕೂ ಅಧಿಕ ಕಾಲ ಅಯೋಧ್ಯೆಯಲ್ಲಿ ಮೋದಿ ಇರಲಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top