Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ  ಜಿಲ್ಲೆಯಲ್ಲಿ ಬೆಳಗ್ಗೆ 06 ರಿಂದ ರಾತ್ರಿ 12 ಗಂಟೆ ವರೆಗೆ ನಿಷೇಧಾಜ್ಞೆ

ದಾವಣಗೆರೆ

ದಾವಣಗೆರೆ: ನಾಳೆ  ಜಿಲ್ಲೆಯಲ್ಲಿ ಬೆಳಗ್ಗೆ 06 ರಿಂದ ರಾತ್ರಿ 12 ಗಂಟೆ ವರೆಗೆ ನಿಷೇಧಾಜ್ಞೆ

ಡಿವಿಜಿ ಸುದ್ದಿ, ದಾವಣಗೆರೆ : ನಾಳೆ  ರಾಮ ಜನ್ಮ ಭೂಮಿಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜಾ ಕಾರ್ಯಕ್ರಮದಲ್ಲಿ  ನಡೆಯಲಿದ್ದು, ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜಿಲ್ಲೆಯಾದ್ಯಂತ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಅಯೋಧ್ಯ ವಿಚಾರವನ್ನು ಅತೀ ಸೂಕ್ಷ್ಮ ವಿಚಾರವಾಗಿ ಪರಿಗಣಿಸಲಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಗುಂಪುಸೇರಿ, ದೇವರ ಫೋಟೊ, ಭಾವಚಿತ್ರಗಳನ್ನಿಟ್ಟು ಯಾವುದೇ ಧಾರ್ಮಿಕ ಪೂಜಾ ಕಾರ್ಯಕ್ರಮಗಳು, ಪ್ರತಿಭಟನೆ ನಡೆಸುವುದು ಜೊತೆಗೆ ಯಾವುದೇ ರೀತಿಯ ಭಾವಚಿತ್ರ, ಬ್ಯಾನರ್ಸ್, ಬಂಟಿಂಗ್ಸ್‍ಗಳನ್ನು ಹಾಕುವುದನ್ನು ನಿಷೇಧಿಸಲಾಗಿದೆ.

davangere dc mahnthes beelagi dvgsuddi

ಅಂದು ದೇವಸ್ಥಾನ ಕಮಿಟಿ ಮತ್ತು ಇತರೆ ಸಂಘಟನೆಗಳು ಸಿಹಿ ಹಂಚಿ ಸಂಭ್ರಮಾಚರಣೆ ಮಾಡುವ ಸಂಭವವಿದ್ದು, ಜಿಲ್ಲೆಯಲ್ಲಿ ಹಿಂದು ಪರ ಸಂಘಟನೆಗಳಿಂದ ಶ್ರೀರಾಮ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಶ್ರೀರಾಮ ದೇವರ ಫೋಟೋ ಭಾವಚಿತ್ರಗಳನ್ನು ಅಥವಾ ಬ್ಯಾನರ್ಸ್, ಫ್ಲೆಕ್ಸ್ ಬೋರ್ಡ್‍ಗಳನ್ನು ಇಟ್ಟು ಪೂಜೆ ಸಲ್ಲಿಸುವ ಸಾಧ್ಯತೆಗಳಿವೆ.

ಈ ಸಂದರ್ಭದಲ್ಲಿ ಕೆಲವು ಮತೀಯ ಸಂಘಟನೆಗಳು ಹಾಗೂ ಹೋರಾಟಗಾರರು ಅಡಚಣೆ ಉಂಟು ಮಾಡಿ ಕಾನೂನು ಸುವ್ಯವಸ್ಥೆ ಧಕ್ಕೆಯುಂಟು ಮಾಡುವ ಸಂಭವವಿದೆ. ಮೊತ್ತೊಂದೆಡೆ ಕೆಲವು ಮುಸ್ಲಿಂ ಸಂಘಟನೆಗಳಿಂದ ವಿರೋಧ ವ್ಯಕ್ತಪಡಿಸಿ ಕಪ್ಪುಬಟ್ಟೆ ಧರಿಸಿ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುವ ಸಾಧ್ಯತೆಗಳಿವೆ.

ಈ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ವತಿಯಿಂದ ಅನುಮತಿ ಇಲ್ಲದೆ ಅಳವಡಿಸಿರುವ ಭಾವಚಿತ್ರ, ಬ್ಯಾನರ್ಸ್, ಬಂಟಿಗ್ಸ್‍ಗಳನ್ನು ತೆರವುಗೊಳಿಸಲಾಗುವುದು. ಯಾವುದೇ ರೀತಿಯ ಮೆರವಣಿಗೆ, ಬೈಕ್ ರ್ಯಾಲಿ ಮತ್ತು ಇತರೆ ಯಾವುದೇ ರ್ಯಾಲಿಗಳು ಸೇರಿದಂತೆ ಪಟಾಕಿ ಸಿಡಿಸುವುದು, ಸಾರ್ವಜನಿಕ ಸ್ಥಳಗಳಲ್ಲಿ ಲೈವ್ ಎಲ್‍ಇಡಿ ಡಿಸ್‍ಪ್ಲೇ ಹಾಕುವುದನ್ನು ನಿಷೇಧಿಸಲಾಗಿದೆ. ಆ.4 ಮತ್ತು 5 ರಂದು ಜಿಲ್ಲೆಯ ಎಲ್ಲಾ ಪಟಾಕಿ ಅಂಗಡಿಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ. ಕೊರೊನಾ ಹರಡುವಿಕೆ ನಿಯಂತ್ರಣ ಸಂಬಂಧ ದೇವಸ್ಥಾನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿ ಪೂಜೆ ಕಾರ್ಯಕ್ರಮಗಳನ್ನು ನಡೆಸುವುದನ್ನು ಸಹ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top