ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಹಿರಿಯ ಮುಖಂಡ ಶಿವಾಜಿರಾವ್ ಪಾಟೀಲ್ ನೀಲಂಗೆಕರ್ (91) ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ.
ಶಿವಾಜಿರಾವ್ ಪಾಟೀಲ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ, ಅವರು ಕಿಡ್ನಿ ಸಮಸ್ಯೆಗೆ ಸಂಬಂಧಿಸಿದ ತೊಂದರೆಯಿಂದು ಇಂದು ನಿಧನರಾಗಿದ್ದಾರೆ.
ಶಿವಾಜಿರಾವ್ ಪಾಟೀಲ್ ಕಳೆದ ತಿಂಗಳು ಕೊರೊನಾ ಟೆಸ್ಟ್ ಮಾಡಿದ್ದು, ವರದಿಯಲ್ಲಿ ಪಾಸಿಟಿವ್ ಬಂದಿತ್ತು. ನಂತರ ಅವರು ಪುಣೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ನಾಲ್ಕು ದಿನಗಳ ಹಿಂದೆ ಮತ್ತೆ ಪರೀಕ್ಷೆಗೆ ಒಳಗಾದಾಗ ನೆಗೆಟಿವ್ ಬಂದಿತ್ತು. ಕೊರೊನಾ ವೈರಸ್ ಪತ್ತೆಯಾದ ನಂತರ ಲಾತೂರ್ ಜಿಲ್ಲೆಯ ನೀಲಂಗದಲ್ಲಿರುವ ತಮ್ಮ ನಿವಾಸದಿಂದ ಪುಣೆಗೆ ಹೋಗಿದ್ದರು.
ಲಾತೂರ್ನ ಪ್ರಬಲ ನಾಯಕರಾದ ಪಾಟೀಲ್ ನೀಲಂಗೆಕರ್ ಅವರು 1985 ರಿಂದ 1986 ರ ಮಾರ್ಚ್ ವರೆಗೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದರು. ಇದಕ್ಕೂ ಮೊದಲು ನೀಲಂಗ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.