ಜನರ ಸಂಕಷ್ಟ ನಿವಾರಿಸವಲ್ಲಿ ಸರ್ಕಾರ ಸಂಪೂರ್ಣ ವಿಫಲ : ಮಾಜಿ ಸಿಎಂ ಸಿದ್ದರಾಮಯ್ಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕಾಗಿರುವ ಸರ್ಕಾರ ಸಂಪೂರ್ಣವಾಗಿ ವಿಫವಾಗಿದ್ದು,  ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆಯೇ ಎಂದು ಸರ್ಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ನಿರಂತರ ಟ್ವೀಟ್  ಮಾಡುವ  ಮೂಲ ಸರ್ಕಾರ  ಎಚ್ಚರಿಸಿದ್ದಾರೆ.  ಅತಿಯಾದ ಮಳೆಯಿಂದಾಗಿ ಉಂಟಾಗುತ್ತಿರುವ ತೊಂದರೆಗಳಿಗೆ ಸ್ಪಂದಿಸುವಂತೆ ರಾಜ್ಯ ಸರ್ಕಾಕ್ಕೆ ಸಲಹೆ ನೀಡಿದ್ದಾರೆ. ಮೊದಲಿಗೆ ಕಳೆದರಡು ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆ, ಏರುತ್ತಿರುವ ನೆರೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕಾಗಿರುವ ಸರ್ಕಾರ ಸಂಪೂರ್ಣ ಸ್ಥಗಿತಗೊಂಡಿದೆ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆಯೇ ಎಂದು ಸರ್ಕಾರಕ್ಕೆ ಸಿದ್ದರಾಮಯ್ಯ ಪ್ರಶ್ನಿಸಿಸಿದ್ದಾರೆ.

ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಮಾತ್ರವಲ್ಲ ಉತ್ತರ ಕರ್ನಾಟಕದಲ್ಲಿಯೂ ಮಳೆಯಿಂದಾಗಿ ಜನ ಪ್ರವಾಹದ ಭೀತಿಯಲ್ಲಿದ್ದಾರೆ. ರಾಜ್ಯ ಸರ್ಕಾರ ತಕ್ಷಣ ಕಾರ್ಯಪ್ರವೃತ್ತವಾಗಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಅವರಿಗೆ ಊಟ-ವಸತಿ ವ್ಯವಸ್ಥೆ ಕಲ್ಪಿಸಿ, ಅವರಲ್ಲಿ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದಿದ್ದಾರೆ.

ರಾಜ್ಯದ ಕಂದಾಯ ಸಚಿವರೂ ಕ್ವಾರಂಟೈನ್‍ಗೊಳಗಾಗಿದ್ದಾರೆಂದು ಹೇಳಲಾಗುತ್ತಿದೆ. ಪ್ರವಾಹ ನಿಯಂತ್ರಣ  ಮತ್ತು ಪರಿಹಾರ ಕಾರ್ಯದಲ್ಲಿ ಕಂದಾಯ ಇಲಾಖೆಯ ಜವಾಬ್ದಾರಿ ಹೆಚ್ಚಿರುವುದರಿಂದ ಪೂರಕ ವ್ಯವಸ್ಥೆ ಮಾಡುವ ಬಗ್ಗೆ ಸಿಎಂ ಯಡಿಯೂರಪ್ಪ ಅವರು ಗಮನ ಹರಿಸಬೇಕು ಎಂದಿದ್ದಾರೆ.

ಆಸ್ಪತ್ರೆಯಲ್ಲಿರುವ ಸಿಎಂ ಯಡಿಯೂರಪ್ಪ ಅವರು ತಕ್ಷಣ ಹಿರಿಯ ಸಹದ್ಯೋಗಿಗಳಿಗೆ ಜವಾಬ್ದಾರಿ ಹಂಚಿ ಅತಿವೃಷ್ಟಿಯ ಸಮಸ್ಯೆಗಳಿಗೆ ಪರಿಹಾರವನ್ನು ಕಲ್ಪಿಸಲು ವ್ಯವಸ್ಥೆ ಮಾಡಬೇಕು ಎಂದು ಸಿಎಂಗೆ ಸಲಹೆ ನೀಡಿದರು.

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರನ್ನು ಸ್ಥಳಕ್ಕೆ ಕಳಿಸಿ ಪ್ರತ್ಯಕ್ಷದರ್ಶಿ ವರದಿಯನ್ನು ತರಿಸಿಕೊಳ್ಳಬೇಕು. ಕಳೆದ ವರ್ಷದ ಆಗಸ್ಟ್-ಅಕ್ಟೋಬರ್ ತಿಂಗಳ ಪ್ರವಾಹದಿಂದ ಜನತೆ ಇನ್ನೂ ಚೇತರಿಸಿಕೊಂಡಿಲ್ಲ. ಹಳೆಯ ಹಾನಿಯ ಪರಿಹಾರ ಕಾರ್ಯವೇ ಇನ್ನೂ ಪೂರ್ಣಗೊಂಡಿಲ್ಲ. ನಿರಂತರವಾಗಿ ಈ ಬಗ್ಗೆ ನಾವು ಎಚ್ಚರಿಸುತ್ತಿದ್ದರೂ ಸರ್ಕಾರ ಸ್ಪಂದಿಸಿಲ್ಲ. ರಾಜ್ಯ ಸರ್ಕಾರದ ಈ ನಿರ್ಲಕ್ಷಕ್ಕೆ ಅಮಾಯಕ ಜನ ಬಲಿಯಾಗುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆಕ್ರೋಶದಿಂದ ಹೇಳಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *