ದಾವಣಗೆರೆ: ವೈದ್ಯ ಹುದ್ದೆಗಳಿಗೆ ಆ. 11 ರಂದು ನೇರ ಸಂದರ್ಶನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ತಜ್ಞವೈದ್ಯರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಒಟ್ಟು 10 ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

ಆಸಕ್ತ ಅರ್ಹ ಅಭ್ಯರ್ಥಿಗಳಿಗೆ ಆಗಸ್ಟ್ 11 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ನೇರ ಸಂದರ್ಶನ (ವಾಕ್ ಇನ್ ಇಂಟರ್‍ವ್ಯೂ) ಏರ್ಪಡಿಸಲಾಗಿದೆ.

ಸಾರ್ವಜನಿಕ ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗೆ ಎಂ.ಬಿ.ಬಿ.ಎಸ್ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಲಾಗುವುದು.

ಜಿಲ್ಲೆಯ ದಾವಣಗೆರೆ ತಾಲ್ಲೂಕು ಹೆಬ್ಬಾಳು, ಕಂದಗಲ್ಲು ಗ್ರಾಮದ ಪ್ರಾ.ಆ.ಕೇಂದ್ರ, ಜಗಳೂರು ತಾಲ್ಲೂಕಿನ ಸೊಕ್ಕೆ, ಹಾಲೇಕಲ್ಲು, ಬಿದರೆಕೆರೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಜಗಳೂರಿನ ಸಾರ್ವಜನಿಕ ಆಸ್ಪತ್ರೆ. ಹೊನ್ನಾಳಿ ತಾಲ್ಲೂಕಿನ ನ್ಯಾಮತಿಯ ಸಮುದಾಯ ಆರೋಗ್ಯ ಕೇಂದ್ರ. ಚನ್ನಗಿರಿ ತಾಲ್ಲೂಕು ನಲ್ಲೂರು, ತಣಿಗೆರೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕೆರೆಬಿಳಚಿಯ ಸಮುದಾಯ ಆರೊಗ್ಯ ಕೇಂದ್ರಗಳಲ್ಲಿ ತಲಾ ಒಂದು ಹುದ್ದೆ ಭರ್ತಿ ಮಾಡಲಾಗುವುದು.

ಅಭ್ಯರ್ಥಿಗಳು ಆಗಸ್ಟ್ 10 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರೊಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿಗೆ ಹಾಜರಾಗಿ ಸಂಬಂಧಪಟ್ಟ ವಿಭಾಗದಲ್ಲಿ ವಿದ್ಯಾರ್ಹತೆ ಮತ್ತು ಮೀಸಲಾತಿಯ ಅರ್ಹತಾ ಮೂಲ ದಾಖಲೆಗಳ ಪರಿಶೀಲನೆ ಮಾಡಿಸಿ, ಅರ್ಹತಾ ದಾಖಲೆಗಳ ಒಂದು ಸೆಟ್ ದೃಢೀಕೃತ ಜೆರಾಕ್ಸ್ ಪ್ರತಿಯನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಎಸ್.ಎಎಸ್. ಹೈಟೆಕ್ ಆಸ್ಪತ್ರೆ ಹತ್ತಿರ, ಶ್ರೀರಾಮನಗರ ರಸ್ತೆ, ಎನ್.ಸಿ.ಸಿ ಕ್ಯಾಂಪ್ ಪಕ್ಕ, ದಾವಣಗೆರೆ ದೂ.ಸಂ: 08192-237833ನ್ನು ಸಂಪರ್ಕಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *