Connect with us

Dvgsuddi Kannada | online news portal | Kannada news online

ಕಡು ಬಡತನದ ವಿದ್ಯಾರ್ಥಿ ಸಾಧನೆ ಕಂಡು ಶಿಕ್ಷಣ ಸಚಿವರ ಕಣ್ತುಂಬಿ ಬಂತು..

ಪ್ರಮುಖ ಸುದ್ದಿ

ಕಡು ಬಡತನದ ವಿದ್ಯಾರ್ಥಿ ಸಾಧನೆ ಕಂಡು ಶಿಕ್ಷಣ ಸಚಿವರ ಕಣ್ತುಂಬಿ ಬಂತು..

ಡಿವಿಜಿ ಸುದ್ದಿ, ಬೆಂಗಳೂರು: ವಿದ್ಯೆ ಯಾರ ಸ್ವತ್ತು ಅಲ್ಲ. ವಿದ್ಯೆಗೆ ಬಡವ, ಶ್ರೀಮಂತ ಎನ್ನುವ ಬೇಧವಿಲ್ಲ. ಹೌದು.., ದೂರದ ಯಾದಗಿರಿಯಿಂದ ಕೂಲಿ ಕಾರ್ಮಿಕನಾಗಿ ಸಿಲಿಕಾನ್ ಸಿಟಿ ಬೆಂಗಳೂರಿಗೆ ಬಂದ ಮಹೇಶ್ ಎನ್ನುವ ವಿದ್ಯಾರ್ಥಿ,  ಕಡು ಬಡತನದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625ಕ್ಕೆ 616 ಅಂಕ ಗಳಿಸಿದ್ದಾನೆ.

ಮಹೇಶ್ ಸಾಧನೆ ಕಂಡ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಇಂದು ಅವರ ಮನೆಗೆ ಭೇಟಿ ನೀಡಿದ್ದರು. ಇಂದಿರಾನಗರದ ಜೀವನಭೀಮಾನಗರದ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ (KPS) ವಿದ್ಯಾರ್ಥಿ ಮಹೇಶ್, ಈ ಬಾರಿಯ  ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 616 ಅಂಕಗಳನ್ನು ಗಳಿಸಿದ್ದಾನೆ.

suresh kumara 2

ಮಹೇಶ ಯಾದಗಿರಿಯಿಂದ ಬೆಂಗಳೂರಿಗೆ ಗುಳೆ ಬಂದಿರುವ ಕುಟುಂಬಕ್ಕೆ ಸೇರಿದ ಬಾಲಕ. ಬಡತನದ ನಡುವೆಯೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ್ದಾನೆ. ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಕೂಲಿ ಕೆಲಸ ಮಾಡಿಕೊಂಡೇ ವಿದ್ಯಾಭ್ಯಾಸ ಮುಗಿಸಿದ್ದಾನೆ.

ಇಂದು ಅವನ ಪುಟ್ಟ ಗುಡಿಸಲಿಗೆ ಶಿಕ್ಷಣ ಸಚಿವರು ಹೋಗಿದ್ದರು. ಆ ಮನೆಯಲ್ಲಿ ಕುಳಿತುಕೊಳ್ಳಲೂ ಜಾಗವಿಲ್ಲದಿದ್ದರೂ, ಮಹೇಶನಿಗೆ ಶಿಕ್ಷಣ ಇಲಾಖೆಯ ಪರವಾಗಿ ಅಭಿನಂದನೆ ಸಲ್ಲಿಸಿ ಕಾಲೇಜು ಶಿಕ್ಷಣಕ್ಕೆ ವ್ಯವಸ್ಥೆ ಮಾಡುವುದಾಗಿ ಧೈರ್ಯ ತುಂಬಿ ಬಂದಿದ್ದೇನೆ  ಎಂದು ಸಚಿವರು  ಫೇಸ್ ಬರೆದುಕೊಂಡಿದ್ದಾರೆ.

ಮಹೇಶನಿಗೆ ಪಿಯುಸಿ ತರಗತಿಗಳಲ್ಲಿ ವಿಜ್ಞಾನ ವಿಷಯಗಳನ್ನು ತೆಗೆದುಕೊಂಡು ಓದಬೇಕೆಂಬ ಮಹದಾಸೆಯಿದೆ. ಅವನ ಮನೆ, ಅವನ ಕುಟುಂಬ, ಅವರ ತಾಯಿಯ ಮುಗ್ಧತೆ, ಮಹೇಶನ ಸಾಧನೆ ಎಲ್ಲ ಕಂಡಾಗ ಕಣ್ತುಂಬಿ ಬಂತು – ಅದೇ ರೀತಿ ಹೃದಯ ತುಂಬಿ ಬಂತು ಎಂದಿದ್ದಾರೆ.

#ಮಹೇಶ ಯಾದಗಿರಿಯಿಂದ ಬೆಂಗಳೂರಿಗೆ ಗುಳೆ ಬಂದಿರುವ ಕುಟುಂಬಕ್ಕೆ ಸೇರಿದ ಬಾಲಕ. ಇಂದಿರಾನಗರದ ಜೀವನಭೀಮಾನಗರದ ವ್ಯಾಪ್ತಿಯಲ್ಲಿರುವ ಕರ್ನಾಟಕ…

Posted by Suresh Kumar S on Monday, August 10, 2020

 

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top