ಡಿವಿಜಿ ಸುದ್ದಿ, ಶಿವಮೊಗ್ಗ: ಬೆಂಗಳೂರಿನ ಡಿ.ಜೆ. ಹಳ್ಳಿ ಹಾಗೂ ಕೆ.ಜೆ.ಹಳ್ಳಿಯಲ್ಲಿ ನಡೆದ ಗಲಭೆಯಲ್ಲಿ ಸಾರ್ವಜನಿಕರ ಆಸ್ತಿಪಾಸ್ತಿ ಹಾನಿಗೆ ಕಾರಣರಾಗಿರುವ ಎಸ್ಡಿಪಿಐ ಮತ್ತು ಪಿಎಫ್ಐ ಸಂಘಟನೆಯನ್ನು ನಿಷೇಧಿಸುವಂತೆ ಬಜರಂಗದಳ ಮತ್ತು ವಿಎಚ್ಪಿ ಸಂಘಟನೆ ಆಗ್ರಹಿಸಿವೆ.
ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ದಾಳಿ ನಡೆಸಿದ ಗೂಂಡಾಗಳನ್ನು ಗಡಿಪಾರು ಮಾಡಬೇಕು. ಸಾರ್ವಜನಿ ಆಸ್ತಿಪಾಸ್ತಿ ಹಾನಿ ಮಾಡಿರುವ ಗೂಂಡಾಗಳಿಂದ ನಷ್ಟ ವಸೂಲಿ ಮಾಡಬೇಕು ಎಂದು ಆಗ್ರಹಿಸಿದರು.
ಎಸ್ಡಿಪಿಐ ಹಾಗೂ ಪಿಎಫ್ಐ ಸಂಘಟನೆಗಳಿಗೆ ಪಾಕಿಸ್ತಾನದ ಐಎಸ್ಐ ನಂಟು ಇದೆ. ಹೀಗಾಗಿ ಈ ಸಂಘಟನೆಯನ್ನು ನಿಷೇಧಿಸುವ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ವಿಎಚ್ಪಿ ಹಾಗೂ ಬಜರಂಗದಳ ಕಾರ್ಯಕರ್ತರು ಒತ್ತಾಯಿಸಿದರು.



