Connect with us

Dvgsuddi Kannada | online news portal | Kannada news online

ಬೆಂಗಳೂರು ಗಲಭೆ: ಮನೆಗೆ ಬೆಂಕಿ ಇಟ್ಟವರ ವಿರುದ್ಧ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಪೊಲೀಸರಿಗೆ ದೂರು

ಪ್ರಮುಖ ಸುದ್ದಿ

ಬೆಂಗಳೂರು ಗಲಭೆ: ಮನೆಗೆ ಬೆಂಕಿ ಇಟ್ಟವರ ವಿರುದ್ಧ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಪೊಲೀಸರಿಗೆ ದೂರು

ಡಿವಿಜಿ ಸುದ್ದಿ, ಬೆಂಗಳೂರು: ಗಲಭೆ ಸಂದರ್ಭದಲ್ಲಿ ನಮ್ಮ ಮನೆಗೆ ಬೆಂಕಿ ಇಟ್ಟವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪುಲಿಕೇಶಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ಡಿ.ಜೆ.ಹಳ್ಳಿ ಠಾಣೆಗೆ ದೂರು ನೀಡಿದರು.

ಇಂದು ಮಧ್ಯಾಹ್ನ ಠಾಣೆಗೆ ಬಂದ ಅವರು, ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ಅವರ ಜೊತೆ  25 ನಿಮಿಷ ಮಾತನಾಡಿದರು.  ಘಟನೆ ಬಗ್ಗೆ ವಿವರಿಸಿ, ಲಿಖಿತವಾಗಿ ದೂರು ಕೂಡ ನೀಡಿದರು.

dj halli 3

ಗಲಭೆ ನಂತರ ಶಾಸಕರು ಠಾಣೆಗೆ ಬಂದು ನೋಡಿರಲಿಲ್ಲ. ಆದರೆ,  ಡಿ.ಜೆ.ಹಳ್ಳಿ ಠಾಣೆಯಲ್ಲಿ ಸುಟ್ಟ ಅವಶೇಷ ನೋಡಿ ಶಾಸಕರು ದಂಗಾದರು.  ನನ್ನ ತಂದೆ ಕಟ್ಟಿದ್ದ ಹಾಗೂ ನಾನು ಆಡಿ ಬೆಳೆದ ಮನೆ ಸುಟ್ಟು ಕರಕಲಾಗಿದೆ. ತಾಯಿ ನೆನಪಿಗೆ ಇದ್ದ ತಾಳಿಯೂ ಕಾಣಿಸುತ್ತಿಲ್ಲ ಎಂದರು.

naveen 2

3 ಕೋಟಿಯಷ್ಟು ಹಾನಿಯಾಗಿದೆ. ಇಡೀ ಮನೆ ಸುಟ್ಟು ಹೋಗಿದೆ.  ತಂದೆ-ತಾಯಿ ನಮ್ಮನ್ನು ಸಾಕಿದ ಮನೆಯನ್ನು ಈ ಸ್ಥಿತಿ ನೋಡಿ ದುಃಖವಾಗುತ್ತಿದೆ. ನನಗೆ ಹಾಗೂ ನನ್ನ ಕುಟುಂಬಕ್ಕೆ ರಕ್ಷಣೆ ಬೇಕು ಹಾಗೂ ಗಲಭೆ ಸೃಷ್ಟಿಸಿರುವ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೇಂದು ಪೊಲೀಸರಿಗೆ ದೂರು‌‌ ನೀಡಿದ್ದೇನೆ ಎಂದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top