ಡಿವಿಜಿ ಸುದ್ದಿ, ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯ ಆರೋಪಿ ನವೀನ್ ವಿರುದ್ಧ ದೂರು ನೀಡಿದ್ದ ವ್ಯಕ್ತಿಯಿಂದಲೇ ಈಗ ಡಿಜೆ ಹಳ್ಳಿ ಠಾಣೆಯಲ್ಲಿ ಗಲಾಟೆ ಮಾಡಿದ ಕಿಡಿಗೇಡಿಗಳ ವಿರುದ್ಧ ಪ್ರತಿ ದೂರು ದಾಖಲಾಗಿದೆ.
ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ್ದಾನೆ ಎಂದು ಆರೋಪಿಸಿ, ನವೀನ್ ವಿರುದ್ಧ ಫಿರ್ದೋಸ್ ಪಾಷಾ ನೀಡಿದ್ದರು. ಇದೀಗ ತನ್ನ ಸ್ಕೂಟರ್ ಅನ್ನು ಕಿಡಿಗೇಡಿಗಳು ಸುಟ್ಟು ಹಾಕಿದ್ದಾರೆ ಎಂದು ಆರೋಪಿಸಿ ಡಿಜೆ ಹಳ್ಳಿ ಠಾಣೆಯಲ್ಲಿ ಮತ್ತೊಂದು ದೂರು ನೀಡಿದ್ದಾರೆ. ಸ್ವತ್ತಿನ ನಾಶ ಹಾಗೂ ನಷ್ಟ ಪ್ರತಿಬಂಧಕ ಅಧಿನಿಯಮ 1981 ಮತ್ತು ಐಪಿಸಿ ಸೆಕ್ಷನ್ 143, 145, 144, 147, 148, 149, 435 ಅಡಿ ಪ್ರಕರಣ ದಾಖಲಾಗಿದೆ. ಬೈಕ್ ಸುಟ್ಟು ಹೋಗಿರುವುದರಿಂದ 75 ಸಾವಿರ ರೂಪಾಯಿ ನಷ್ಟವಾಗಿದೆ ಎಂದು ಫಿರ್ದೋಶ್ ಪಾಶಾ ದೂರು ದಾಖಲಿಸಿದ್ದಾನೆ.

ಆಗಸ್ಟ್ 11 ರ ಸಂಜೆ 7:30ಕ್ಕೆ ನಾನು ನನ್ನ ಹೊಂಡಾ ಆಕ್ವೀವಾವನ್ನು ಡಿಜೆ ಹಳ್ಳಿ ಠಾಣೆಯಲ್ಲಿ ನಿಲ್ಲಿಸಿ ದೂರು ನೀಡಲು ಬಂದಿದ್ದೇವು. ಈ ವೇಳೆ ಸುಮಾರು ಜನ ಠಾಣೆಯ ಒಳಗಡೆ ಬಂದು ಜಮಾಯಿಸಿದ್ದಾರೆ. ಈ ಸಂದರ್ಭದಲ್ಲಿ ನನಗೆ ನನ್ನ ಆಕ್ಟೀವಾವನ್ನು ತೆಗೆದುಕೊಂಡು ಹೋಗಲು ಸಾಧ್ಯವಾಗಲಿಲ್ಲ. ರಾತ್ರಿ 9 ಗಂಟೆಗೆ ಜಮಾಯಿಸಿದ ಜನ ನನ್ನ ಸ್ಕೂಟರ್ ಅನ್ನು ಸುಟ್ಟು ಹಾಕಿದ್ದಾರೆ.
ಗಲಭೆಯಾದ ದಿನದಂದು 144 ಸೆಕ್ಷನ್ ಜಾರಿಯಾದ ಕಾರಣ ನನಗೆ ಆ ದಿನವೇ ದೂರು ನೀಡಲು ಸಾಧ್ಯವಾಗಲಿಲ್ಲ. ಈಗ ದೂರು ನೀಡುತ್ತಿದ್ದೇನೆ. ನನ್ನ ಸ್ಕೂಟರನ್ನು ಸುಟ್ಟು ಹಾಕಿ ನಾಶ ಮಾಡಿದ ಕಿಡಿಗೇಡಿಗಳನ್ನು ಪತ್ತೆ ಹಚ್ಚುವಂತೆ ಮನವಿ ಮಾಡಿದ್ದಾನೆ.
ನವೀನ್ ವಿರುದ್ಧವೇ ದೂರು ನೀಡಿದ ಫಿರ್ದೋಸ್ ಪಾಷಾ ಅವರೇ ಗಲಾಟೆ ಮಾಡಿದ ಕಿಡಿಗೇಡಿಗಳ ವಿರುದ್ಧ ದೂರು ನೀಡಿದ್ದು ಈ ಪ್ರಕರಣ ಮತ್ತಷ್ಟು ಟ್ವಿಸ್ಟ್ ಸಿಕ್ಕಂತಾಗಿದೆ. ದೂರು ಕೊಟ್ಟವರಿಗೂ ಗಲಾಟೆ ಮಾಡಿದವರಿಗೂ ಸಂಬಂಧ ಇಲ್ಲವೇ? ಎನ್ನುವ ಪ್ರಶ್ನೆ ಎದ್ದಿದೆ.



