ಡಿವಿಜಿ ಸುದ್ದಿ, ಬೆಂಗಳೂರು: ಡಿಜೆ ಹಳ್ಳಿ ಗಲಭೆಯನ್ನು ಸರ್ಕಾರ ಮ್ಯಾಜಿಸ್ಟ್ರೀರಿಯಲ್ ತನಿಖೆಗೆ ವಹಿಸಿದೆ. ಇದರಿಂದ ಸತ್ಯಾಂಶ ಹೊರಬರಲು ಸಾಧ್ಯ ಆಗುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮ್ಯಾಜಿಸ್ಟ್ರೀರಿಯಲ್ ತನಿಖೆಯಿಂದ ಸತ್ಯಾಂಶ ಹೊರಬರಲು ಸಾಧ್ಯ ಆಗುವುದಿಲ್ಲ. ಈ ಹಿಂದೆ ನಡೆದ ಹಲವು ಘಟನೆಗಳ ತನಿಖೆ ಏನಾಗಿದೆ ಎನ್ನುವುದು ನನಗೆ ಗೊತ್ತಿದೆ ಎಂದರು.
ಡಿ.ಜೆ, ಹಳ್ಳಿ ,ಕೆ.ಜಿ. ಹಳ್ಳಿ ಗಲಭೆ ಕುರಿತು ಹೈಕೋರ್ಟ್ನ ಹಾಲಿ ನ್ಯಾಯಮೂರ್ತಿಯ ನೇತೃತ್ವದಲ್ಲಿ ತನಿಖೆ ನಡೆಯಬೇಕು. ಘಟನೆಗೆ ಕಾರಣ ಏನು ಎನ್ನುವುದು ತನಿಖೆಯಿಂದ ಹೊರ ಬರಲಿದೆ. ಗಲಭೆ ಪ್ರಕರಣದಲ್ಲಿ 300ಕ್ಕಿಂತಲೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ. ನಿರಪರಾಧಿಗಳಿಗೆ ಯಾವುದೇ ತೊಂದರೆ ಆಗಬಾರದು ಎಂದು ತಿಳಿಸಿದರು.



