Connect with us

Dvgsuddi Kannada | online news portal | Kannada news online

ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತೆ: ಕಾಗಿನೆಲೆ ಶ್ರೀ  

ಪ್ರಮುಖ ಸುದ್ದಿ

ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತೆ: ಕಾಗಿನೆಲೆ ಶ್ರೀ  

ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಿಸಿದರೆ, ಗಂಭೀರ ಪರಿಣಾಮ  ಎದುರಿಸಬೇಕಾಗುತ್ತದೆ ಎಂದು ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ಹರಿಹರ ತಾಲೂಕಿನ ಬೆಳ್ಳೂಡಿ ಕನಕ ಗುರುಪೀಠದ ಶಾಖಾಮಠದಲ್ಲಿ ಮಾತನಾಡಿದ ಶ್ರೀಗಳು,  ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಿಸಬೇಕು ಎಂದು ಒತ್ತಾಯಿಸಿರುವ ಜಿಲ್ಲೆಯ ಬಿಜೆಪಿ ಶಾಸಕರುಗಳಿಗೆ ಕಾಗಿನೆಲೆ ಎಚ್ಚರಿಕೆ ಮಾತುಗಳನ್ನಾಡಿದ್ದಾರೆ.

bhirathi basavaraju

ದಾವಣಗೆರೆ ಜಿಲ್ಲೆಯ ಶಾಸಕರು ಸಚಿವರಾಗಲಿ. ಆದರೆ,  ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಿ, ಬದಲಾಯಿಸಲು ಮುಂದಾದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ. ಸಚಿವ ಬೈರತಿ ಬಸವರಾಜ್ ಬಗ್ಗೆ ಗಂಭೀರ ಆರೋಪ ಮಾಡಿ ಉಸ್ತುವಾರಿಯಿಂದ ಕೆಳಗಿಳಿಸಲು ಯತ್ನಿಸಿದರೆ ಸುಮ್ಮನೆ ಕೂರುವುದಿಲ್ಲ ಎಂದು ಎಚ್ಚರಿಕೆ ಸಂದೇಶ ನೀಡಿದ್ದಾರೆ.

ಬೇರೆ ಜಿಲ್ಲೆಯ ಉಸ್ತುವಾರಿ ಸಚಿವರು ಯಾವಗಲೂ ಒಮ್ಮೆ ಬರುತ್ತಾರೆ. ಸ್ಥಳೀಯ ಶಾಸಕರಿಗೆ ಸಚಿವ ಸ್ಥಾನ ನೀಡಿ, ಸ್ಥಳೀಯರಿಗೆ ಉಸ್ತುವಾರಿ ನೀಡಿದರೆ ಉತ್ತಮ ಎಂದು ಜಿಲ್ಲಾ ಬಿಜೆಪಿ ಶಾಸಕರು ಇತ್ತೀಚೆಗೆ ಸಭೆ ನಡೆಸಿದ ವಿಚಾರ ಬಹಿರಂಗವಾದ ಹಿನ್ನೆಲೆ ಕಾಗಿನೆಲೆ ಶ್ರೀಗಳು ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top