ಡಿವಿಜಿ ಸುದ್ದಿ, ಬೆಂಗಳೂರು: ಕನಿಷ್ಠಪಕ್ಷ ಸತ್ಯಗಳನ್ನು ಗಟ್ಟಿಯಾಗಿ ಹೇಳುವ ಧೈರ್ಯ ಕೂಡ ಕಾಂಗ್ರೆಸ್ ನಾಯಕರಿಗೆ ಇಲ್ಲ. ಇನ್ನು ಅವರದೇ ಪಕ್ಷದ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿರಿಗೆ ಕಾಂಗ್ರೆಸ್ ನಾಯಕರಿಂದ ನ್ಯಾಯ ಸಿಗಲು ಹೇಗೆ ಸಾಧ್ಯ ಎಂದು ಶಿಕ್ಷಣ ಸಚಿವ ಸುಧಾಕರ್ ಪ್ರಶ್ನಿಸಿದರು.
ಈ ಬಗ್ಗೆ ಸಚಿವ ಸುಧಾಕರ್ ಟ್ವೀಟ್ ಮೂಲಕ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷವನ್ನು ಪ್ರಶ್ನಿಸಿದ್ದಾರೆ. ತನುವಿನ ಕೋಪ ತನ್ನ ಹಿರಿಯತನದ ಕೇಡು, ಮನದ ಕೋಪ ತನ್ನ ಅರಿವಿನ ಕೇಡು, ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ ನೆರೆಮನೆಯ ಸುಡದು ಕೂಡಲಸಂಗಮದೇವಾ?” ಎಂಬ ಗಾದೆಯ ಮಾತನ್ನು ಹೇಳಿದ್ದಾರೆ.
ʼತನುವಿನ ಕೋಪ ತನ್ನ ಹಿರಿಯತನದ ಕೇಡು, ಮನದ ಕೋಪ ತನ್ನ ಅರಿವಿನ ಕೇಡು, ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ ನೆರೆಮನೆಯ ಸುಡದು ಕೂಡಲಸಂಗಮದೇವಾʼ …,
ಬೆಂಗಳೂರು ಗಲಭೆ ಕಾರಣ ಯಾರು? ಎಂಬ ಸತ್ಯದ ಹೊರ ಬರುತ್ತಿದೆ. ಕಾಂಗ್ರೆಸ್ ಕಾಪೊರೇಟರ್ಗಳಾದ ಸಂಪತ್ರಾಜ್, ಜಾಕೀರ್ ಅವರು ಇಂದು ಸಿಸಿಬಿ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ (1/2) pic.twitter.com/1t5OV3HBIG
— Dr Sudhakar K (@DrSudhakar_) August 18, 2020
ಬೆಂಗಳೂರು ಗಲಭೆ ಕಾರಣ ಯಾರು? ಎಂಬ ಸತ್ಯ ಹೊರ ಬರುತ್ತಿದೆ. ಕಾಂಗ್ರೆಸ್ ಕಾರ್ಪೊರೇಟರ್ಗಳ ಸಂಪತ್ರಾಜ್, ಜಾಕೀರ್ ಅವರು ಇಂದು ಸಿಸಿಬಿ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಕನಿಷ್ಠಪಕ್ಷ ಸತ್ಯಗಳನ್ನು ಗಟ್ಟಿಯಾಗಿ ಹೇಳುವ ಧೈರ್ಯ ಇಲ್ಲದ ಕಾಂಗ್ರೆಸ್ ನಾಯಕರಿಗೆ ಅದೇ ಪಕ್ಷದ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಯವರಿಗೆ ಕಾಂಗ್ರೆಸ್ ನಾಯಕರಿಂದ ನ್ಯಾಯ ಸಿಗಲು ಸಾಧ್ಯವೇ? ಎಂದು ಪ್ರಶ್ನಿಸಿದರು. ಈ ಜಗತ್ತಿನಲ್ಲಿ ಚಿರಕಾಲ ಉಳಿಯುವಂಥದ್ದು ನಯ-ವಿನಯವೇ ಹೊರತು ಮೃಗೀಯತೆಯೂ ಅಲ್ಲ, ದೇಹಬಲವೂ ಅಲ್ಲ. ಸತ್ಯಕ್ಕೆ ಸಾವಿಲ್ಲ ಎಂದಿದ್ದಾರೆ.
ಕನಿಷ್ಠಪಕ್ಷ ಸತ್ಯಗಳನ್ನು ಗಟ್ಟಿಯಾಗಿ ಹೇಳುವ ಧೈರ್ಯ ಇಲ್ಲದ ಕಾಂಗ್ರೆಸ್ ನಾಯಕರಿಗೆ ಅದೇ ಪಕ್ಷದ ದಲಿತ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಯವರಿಗೆ ಕಾಂಗ್ರೆಸ್ ನಾಯಕರಿಂದ ನ್ಯಾಯ ಸಿಗಲು ಸಾಧ್ಯವೇ? ಈ ಜಗತ್ತಿನಲ್ಲಿ ಚಿರಕಾಲ ಉಳಿಯುವಂಥದ್ದು ನಯ-ವಿನಯವೇ ಹೊರತು ಮೃಗೀಯತೆಯೂ ಅಲ್ಲ ದೇಹಬಲವೂ ಅಲ್ಲ. ಸತ್ಯಕ್ಕೆ ಸಾವಿಲ್ಲ.(2/2) pic.twitter.com/2Sz4ubFZn8
— Dr Sudhakar K (@DrSudhakar_) August 18, 2020



