ಡಿವಿಜಿ ಸುದ್ದಿ, ಬೆಂಗಳೂರು: ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿದ ಅವರು, ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆಗೆ ಜಮೀರ್ ಒಳಗಾಗಿದ್ದರು. ಇಂದು ಪರೀಕ್ಷೆಯಲ್ಲಿ ಕೊರೊನಾ ಇರುವುದು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕದಲ್ಲಿದ್ದವರು ಪರೀಕ್ಷೆಗೆ ಒಳಗಾಗಬೇಕು ಎಂದು ಮನವಿ ಮಾಡಿದ್ದಾರೆ.
ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದೆ, ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡುತ್ತೇನೆ. pic.twitter.com/GYENfTI13R
— B Z Zameer Ahmed Khan (@BZZameerAhmedK) August 18, 2020
ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆಯ ಬಳಿಕ ಜಮೀರ್ ಅಹ್ಮದ್ ನಗರದ ಹಲವೆಡೆ ಸುತ್ತಾಡಿದ್ದರು. ಮೌಲ್ವಿಗಳೊಂದಿಗೆ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಭೇಟಿ ನೀಡಿದ್ದರು. ಗಲಭೆಯಲ್ಲಿ ಬಲಿಯಾದವರ ಯುವಕರ ಮನೆಗೆ ಹೋಗಿ ಸಾಂತ್ವನ ಕೂಡ ಹೇಳಿದ್ದರು.



