Connect with us

Dvgsuddi Kannada | online news portal | Kannada news online

ಬೆಳೆ ಸಮೀಕ್ಷೆ ಆಪ್‌ ಸದ್ಬಳಕೆ ಮಾಡಿಕೊಳ್ಳಿ: ಕೃಷಿ ಸಚಿವ ಬಿ.ಸಿ. ಪಾಟೀಲ್

ಪ್ರಮುಖ ಸುದ್ದಿ

ಬೆಳೆ ಸಮೀಕ್ಷೆ ಆಪ್‌ ಸದ್ಬಳಕೆ ಮಾಡಿಕೊಳ್ಳಿ: ಕೃಷಿ ಸಚಿವ ಬಿ.ಸಿ. ಪಾಟೀಲ್

ಡಿವಿಜಿ ಸದ್ದಿ, ದಾವಣಗೆರೆ:  ರಾಜ್ಯದ ರೈತರು  ಬೆಳೆ ಸಮೀಕ್ಷೆ ಆಪ್‌ನ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಕರೆ ನೀಡಿದರು.

ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದ  ಮೆಕ್ಕೆಜೋಳದ ಹೊಲದಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆ ಕಾರ್ಯವನ್ನು ಉದ್ಘಾಟಿಸಿ ಮಾತನಾಡಿದರು.

ಬೆಳೆ ಸಮೀಕ್ಷೆ ಆಪ್‌ನಲ್ಲಿ ರೈತರು ತಮ್ಮ ಜಮೀನುಗಳಲ್ಲಿನ ಬೆಳೆಗಳ ಸಮೀಕ್ಷೆಯ ಸಮಗ್ರ ವಿವರಗಳನ್ನು ನೀಡಿದರೆ ಮುಂದಿನ ದಿನಗಳಲ್ಲಿ ಸರಕಾರದ ಸವಲತ್ತು ಪಡೆಯಲು ಅನುಕೂಲವಾಗಲಿದೆ ಎಂದು ತಿಳಿಸಿದರು.

ರೈತರಿಂದಲೇ ಬೆಳೆ ಸಮೀಕ್ಷೆ ಕಾರ್ಯವನ್ನು ಪ್ರಾರಂಭಿಸಿ ಇಂದಿಗೆ ನಾಲ್ಕು ದಿನಗಳಾಗಿವೆ. ಈ ಅಲ್ಪ ಅವಧಿಯಲ್ಲಿ 1,52,951 ರೈತರು ತಮ್ಮ ಜಮೀನುಗಳ ಬೆಳೆ ವಿವರಗಳನ್ನು ಆಪ್‌ನಲ್ಲಿ ದಾಖಲಿಸಿದ್ದಾರೆ. ಇದರಿಂದ ರೈತರು ತಾಂತ್ರಿಕವಾಗಿ ಅಭಿವೃದ್ಧಿ ಹೊಂದಿದ್ದಾರೆ ಎಂಬುದಕ್ಕೆ ಇದು ಸ್ಪಷ್ಟ ನಿದರ್ಶನ ಎಂದು ಹೇಳಿದರು.

ರಾಜ್ಯದ 2.10 ಲಕ್ಷ ರೈತರ ಪೈಕಿ ಕಳೆದ ಬಾರಿ 1.50 ಲಕ್ಷ ರೈತರು ಮಾತ್ರ ಬೆಳೆ ಸಮೀಕ್ಷೆ ವಿವರ ನೀಡಿದ್ದರು. ಇದಕ್ಕೆ ಮುಖ್ಯ ಕಾರಣ 60 ಲಕ್ಷ ರೈತರ ಜಮೀನುಗಳ ಪೋಡಿ ಕಾರ್ಯ ಆಗಿಲ್ಲದಿರುವುದು. ಆ ಹಿನ್ನೆಲೆಯಲ್ಲಿ ಒಂದೇ ಸರ್ವೇ ನಂಬರ್‌ನಲ್ಲಿ ಇರುವ ಐದಾರು ರೈತರ ಜಮೀನುಗಳ ವಿವರಗಳನ್ನು ಅಪ್‌ಲೋಡ್ ಮಾಡಲು ಆಗುತ್ತಿರಲಿಲ್ಲ. ಆದ್ದರಿಂದ, ಈ ಬಾರಿ ತೊಂದರೆ ಉದ್ಭವಿಸಬಾರದು ಎಂಬ ಉದ್ದೇಶದಿಂದ ರೈತರಿಂದಲೇ ಬೆಳೆ ಸಮೀಕ್ಷೆ ಕಾರ್ಯ ನಡೆಸಲು ಹಾಗೂ ವಿವರಗಳನ್ನು ಆಪ್‌ಗೆ ಅಪ್‌ಲೋಡ್ ಮಾಡಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top