ಬಿಜೆಪಿ ಸರ್ಕಾರ ತಾಳ, ತಂತಿ ಇಲ್ಲದ ಸರ್ಕಾರ : ಬಸವರಾಜ್ ಹೊರಟ್ಟಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಧಾರವಾಡ: ಬಿಜೆಪಿ ಸರ್ಕಾರ ತಾಳ, ತಂತಿ ಎರಡೂ ಇಲ್ಲದ ಸರ್ಕಾರ.  ಇದು ವಲಸಿಗರು ಮತ್ತು ಮೂಲರ ಮಧ್ಯೆ ನಡೆಯುತ್ತಿರುವ ಸರ್ಕಾರ  ಎಂದು ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿ  ವ್ಯಂಗ್ಯವಾಡಿದರು.
ಧಾರವಾಡದಲ್ಲಿ ರಾಜ್ಯ ಸರ್ಕಾರದ ಭೂಸುಧಾರಣೆ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಇತ್ತು. ಬಿಜೆಪಿ-ಜೆಡಿಎಸ್ ಸರ್ಕಾರವೂ ರಚನೆ ಆಗಿತ್ತು. ಆದರೆ ಈಗ ಇರುವುದು ಮೂರು ಪಕ್ಷದ ಸರ್ಕಾರ ಎಂದರು.

ಸದ್ಯ ನಾವಂತೂ ವಿರೋಧ ಪಕ್ಷದಲ್ಲಿದ್ದೇವೆ. ಭೂ ಸುಧಾರಣೆ ಕಾಯ್ದೆ ಸೇರಿ ಪ್ರಮುಖ ಬೇಡಿಕೆಗಳಿವೆ. ಇವೆಲ್ಲವನ್ನೂ ಸರಿಮಾಡಬೇಕು. ಇಲ್ಲದೇ ಹೋದಲ್ಲಿ ಬರುವ ಅಧಿವೇಶನದಲ್ಲಿ ಸರ್ಕಾರಕ್ಕೆ ಇದೆ ಮಾರಿ ಹಬ್ಬ ಎಂದು ಕಿಡಿಕಾರಿದರು.

ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹೋರಿಗೆ ಹೋಲಿಸಿ ಮಾತನಾಡಿ,  ಸರ್ಕಾರದಲ್ಲಿ ಎಷ್ಟು ಬೇಕು ಅಷ್ಟು ಮೇಯ್ಲಿ. ನಮ್ಮೂರ ಹೋರಿ ಎಲ್ಲಿ ಎಷ್ಟು ಮೇಯ್ದರೇನು, ಮತ್ತೇ ನಮ್ಮ ಮನೆಗೆ ಬರಬೇಕು ಎಂದರು. ಬಿ.ಸಿ. ಪಾಟೀಲ್ ನಮ್ಮೂರಿನ ಹೋರಿ ಎಂದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *