ಕೊಹ್ಲಿಯನ್ನು ಆರ್ ಸಿಬಿ ನಾಯಕತ್ವದಿಂದ ಕೆಳಗಿಳಿಸಿ:  ಆರ್ ಸಿಬಿ ಚೇರ್‌ಮ್ಯಾನ್ ಹೇಳಿದ್ದೇನು ಗೊತ್ತಾ..?

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಬೆಂಗಳೂರು:ಈ ಬಾರಿಯ ಐಪಿಎಲ್ ಟೂರ್ನಿಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ  ಯುಎಇಗೆ ಪ್ರಯಾಣ ಬೆಳೆಸಿದೆ.

ವಿರಾಟ್ ಕೊಹ್ಲಿ ನೇತೃತ್ವದ ಆರ್ ಸಿಬಿ ತಂಡ  ಐಪಿಎಲ್‍ ಜನಪ್ರಿಯ ತಂಡ. ಆದರೆ, ಈವರೆಗೆ  ಒಂದು ಬಾರಿಯೂ ಕಪ್ ಗೆದ್ದಿಲ್ಲ. ಭಾರತ ತಂಡವನ್ನು ಮುನ್ನಡೆಸುವ ನಾಯಕ ವಿರಾಟ್ ಕೊಹ್ಲಿಯವರೇ ನಾಯಕನಾದರೂ ತಂಡ ಒಂದು ಬಾರಿಯೂ ಕಪ್ ಗೆದ್ದಿಲ್ಲ. ಹೀಗಾಗಿ ತಂಡದ ನಾಯಕತ್ವವನ್ನು ಬದಲಿಸಿ ಕೊಹ್ಲಿಯನ್ನು ನಾಯಕತ್ವದಿಂದ ಕೆಳಗಿಳಿಸಿ ಎಂಬುದು ಕೆಲ ಅಭಿಮಾನಿಗಳ ವಾದವಾಗಿದೆ.

ಇದಕ್ಕೆ ಆರ್‌ಸಿಬಿ ತಂಡದ ಚೇರ್‌ಮ್ಯಾನ್ ಸಂಜೀವ್ ಚುರಿವಾಲಾ ಪ್ರತಿಕ್ರಿಯಿಸಿ, ವಿರಾಟ್ ಭಾರತ ತಂಡದ ನಾಯಕ. ಹೆಚ್ಚಿನ ಅಭಿಮಾನಿಗಳನ್ನು ಹೊಂದಿರುವ ಆಟಗಾರ. ಆಟ ಎಂದ ಮೇಲೆ ಸೋಲು ಗೆಲುವು ಸಾಮಾನ್ಯ. ಆದರೆ ವಿರಾಟ್ ಅವರು ಯಾವ ರೀತಿಯ ಟ್ರ್ಯಾಕ್ ರೆಕಾರ್ಡ್  ಮರೆಯಬಾರದು.  ಆರ್‌ಸಿಬಿ ತಂಡದ ಮಾಲೀಕನಾಗಿ ನಮಗೆ ಕೊಹ್ಲಿ ತಂಡದ ನಾಯಕನಾಗಿರುವುದು ಹೆಮ್ಮೆ  ಇದೆ ಎಂದಿದ್ದಾರೆ.

rcb 2

ಕಳೆದ ಆವೃತ್ತಿಯಲ್ಲಿ ತಂಡದಲ್ಲಿದ್ದ ವೈಫಲ್ಯಗಳನ್ನು ಗಮನದಲ್ಲಿ ಇಟ್ಟುಕೊಂಡು, ಈ ಬಾರಿಯ ಹಾರಜಿನಲ್ಲಿ ಉತ್ತಮ ಆಟಗಾರರನ್ನು ಖರೀದಿ ಮಾಡಿದ್ದೇವೆ. ಆರ್‌ಸಿಬಿ ತಂಡ ಬಹಳ ಬ್ಯಾಲೆನ್ಸ್ ಆಗಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡು ವಿಭಾಗದಲ್ಲೂ ತಂಡ ಬಹಳ ಬಲಿಷ್ಠವಾಗಿದೆ. ಈ ಬಾರಿ ಕಪ್ ಗೆಲ್ಲುವ ವಿಶ್ವಾದಲ್ಲಿ ಇದ್ದೇವೆ ಎಂದು ಚುರಿವಾಲಾ ತಿಳಿಸಿದ್ದಾರೆ.

ತಂಡದಲ್ಲಿ ಉತ್ತಮ ಆಟಗಾರರು ಇದ್ದರೂ ಆರ್‌ಸಿಬಿ ತಂಡ ಕಪ್ ಗೆಲ್ಲುವಲ್ಲಿ ವಿಫಲವಾಗಿದೆ. ಆರ್‍ಸಿಬಿ ಕಳೆದ ಮೂರು ಆವೃತ್ತಿಲ್ಲೂ ಅಂಕಪಟ್ಟಿಯಲ್ಲಿ, 8, 6 ಮತ್ತು 8ನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ. ಇದು ಅಭಿಮಾನಿಗಳನ್ನು ನಿರಾಸೆ ಮೂಡಿಸಿದೆ.

rcb 3

ಐಪಿಎಲ್‍ನಲ್ಲಿ ಬ್ಯಾಟ್ಸ್‍ಮ್ಯಾನ್ ಆಗಿ ಉತ್ತಮ ಸಾಧನೆ ಮಾಡಿರುವ ಕೊಹ್ಲಿ, ಐಪಿಎಲ್‍ನಲ್ಲಿ 37.84ರ ಸರಾಸರಿಯೊಂದಿಗೆ ಒಟ್ಟು 5,412 ರನ್ ಗಳಿಸಿದ್ದಾರೆ ಮತ್ತು 131.61 ಸ್ಟ್ರೈಕ್ ರೇಟ್ ಬ್ಯಾಟ್ ಬೀಸಿದ್ದಾರೆ. ಆದರೆ, ನಾಯಕನಾಗಿ ಐಪಿಎಲ್ ಟ್ರೋಫಿ ಗೆಲ್ಲುವುದಕ್ಕೆ ಸಾಧ್ಯವಾಗಿಲ್ಲ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *