ತಮ್ಮದೇ ಜಮೀನಲ್ಲಿ ಬೆಳೆ ಸಮೀಕ್ಷೆ ಪ್ರಾತ್ಯಕ್ಷಿಕೆ ನಡೆಸಿದ ಕೃಷಿ ಸಚಿವ ಬಿ.ಸಿ. ಪಾಟೀಲ್  

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಹಾವೇರಿ: ರೈತರ ಮೂಲಕವೇ ಬೆಳೆ ಸಮೀಕ್ಷೆಗೆ ಮುಂದಾಗಿರುವ ಸರ್ಕಾರ, ಆ್ಯಪ್ ಮೂಲಕ ರೈತರೇ ತಮ್ಮ ಬೆಳೆಯ ಫೋಟೋ ಅಪ್ ಲೋಡ್ ಮಾಡಿ ಬೆಳೆಯನ್ನು   ನಮೂದಿಸಬಹುದು. ಈ ಬಗ್ಗೆ ಕೃಷಿ ಸಚಿವ ಬಿ.ಸಿ.ಪಾಟೀಲ್‌ ಅವರು ರಾಜ್ಯದಾದ್ಯಂತ  ರೈತರ  ಜಮೀನಿಗೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ.

ಇಂದು  ಸಚಿವರು ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಯಲವಾಳ ಗ್ರಾಮದ ತಮ್ಮ ಜಮೀನಿನಲ್ಲಿ ರೈತ ಬೆಳೆ ಸಮೀಕ್ಷೆ ಆ್ಯಪ್ ಪ್ರಾತ್ಯಕ್ಷಿಕೆ ನಡೆಸಿದರು.ಜಮೀನಿನಲ್ಲಿ ನಿಂತು ಬೆಳೆ ವಿವರ ಸರ್ವೆ ನಂಬರ್ ಸೇರಿದಂತೆ ಜಮೀನಿನಲ್ಲಿನ‌ ತಮ್ಮ ಭಾವಚಿತ್ರವನ್ನು ಆ್ಯಪ್‌ನಲ್ಲಿ ಅಪ್ಲೋಡ್‌ ಮಾಡಿ ರೈತರಿಗೆ ಮಾದರಿಯಾದರು.

crop app 2

ಈ ಸಂದರ್ಭದಲ್ಲಿ ಮಾತನಾಡಿದ ಅವರು, ರೈತನ ಬೆಳೆ ರೈತನ ಹಕ್ಕಾಗಿದೆ. ಇದೇ ದೇಶದಲ್ಲಿ ಮೊದಲ ಬಾರಿಗೆ ರೈತನೇ ಸ್ವತಃ ತನ್ನ ಹೊಲದ ಸಮೀಕ್ಷೆ ನಡೆಸಿ ತಾನೇ ಪ್ರಮಾಣಪತ್ರ‌ ನೀಡುವಂತಹ ಮಹತ್ವದ ಆ್ಯಪ್ ಇದಾಗಿದ್ದು, ರೈತರು ಆ್ಯಪ್ ಸಮೀಕ್ಷೆ ಬಗ್ಗೆ ಹೆಚ್ಚೆಚ್ಚು ಒಲವು ತೋರುತ್ತಿದ್ದಾರೆ. ಈ ಬಾರಿಯ ರೈತ ಬೆಳೆ ಸಮೀಕ್ಷೆ ರೈತರ ಬೆಳೆಯ ಉತ್ಸವವೇ ಆಗಿದೆ ಎಂದರು.

crop app 3

ಸಮೀಕ್ಷೆಗೆ ದೊರೆತಿರುವ ಅಭೂತಪೂರ್ವ ಸ್ಪಂದನೆ ಕಂಡು ಆಗಸ್ಟ್ 24 ರವರೆಗೆ ನಿಗದಿಗೊಳಿಸಲಾಗಿದ್ದ ರೈತ ಬೆಳೆ ಆ್ಯಪ್ ಸಮೀಕ್ಷೆಯ ಅವಧಿಯನ್ನು ಇನ್ನು ಸ್ವಲ್ಪದಿನಗಳ ಕಾಲ ವಿಸ್ತರಿಸಲಾಗಿದೆ. ಕೇಂದ್ರ ಸರ್ಕಾರವು ಸಹ ರಾಜ್ಯದ ಈ ಕ್ರಾಂತಿಕಾರಕ ಹಾಗೂ ರೈತೋಪಯೋಗಿ ಆ್ಯಪ್ ಸಮೀಕ್ಷೆಯಿಂದ ಪ್ರೇರಿತಗೊಂಡಿದ್ದು, ದೇಶದ ಇತರೇ ಜಿಲ್ಲೆಗಳಲ್ಲಿಯೂ ಸಹ ಜಾರಿಗೊಳಿಸಲು ಮುಂದಾಗಿದೆ ಎಂದರು.

Farmers Crop Survey App 2020-21 ಹೆಸರಿನಲ್ಲಿ ಈ ಆ್ಯಪ್ ಬಿಡುಗಡೆಯಾಗಿದೆ. ಕರ್ನಾಟಕ ಸರ್ಕಾರ ಅಭಿವೃದ್ಧಿ ಪಡಿಸಿರುವ ಈ ಅಪ್ಲಿಕೇಶನ್‌ ಅನ್ನು ಇಲ್ಲಿಯವರೆಗೆ 50 ಸಾವಿರ ಮಂದಿ ಡೌನ್‌ಲೋಡ್‌ ಮಾಡಿದ್ದಾರೆ. 62 ಎಂಬಿ ಗಾತ್ರದ ಈ ಅಪ್ಲಿಕೇಶನ್‌ ಆಂಡ್ರಾಯ್ಡ್‌ 5.0 ಲಾಲಿಪಾಪ್‌ ಸೇರಿದಂತೆ ನಂತರ ಓಎಸ್‌ ಇರುವ ಫೋನ್‌ಗಳಿಗೆ ಸಪೋರ್ಟ್‌ ಮಾಡುತ್ತದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *