ನವದೆಹಲಿ: ಎಐಸಿಸಿ ಅಧ್ಯಕ್ಷರ ಆಯ್ಕೆ ಸಂಬಂಧ ಆರಂಭಗೊಂಡಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಹಿರಿಯ ನಾಯಕರ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಕ್ಕೆ ಕಪಿಲ್ ಸಿಬಲ್ ಟ್ವಿಟ್ಟರ್ನಲ್ಲಿ ಗರಂ ಆಗಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದಅವರು, ನಾವುಬಿಜೆಪಿಯೊಂದಿಗೆಒಡನಾಟಹೊಂದಿದ್ದೇವೆಎಂದುಹೇಳುತ್ತಾರೆ. ಆದರೆನಾವುಕಳೆದ 30 ವರ್ಷಗಳಲ್ಲಿಯಾವುದೇವಿಷಯದಬಗ್ಗೆಬಿಜೆಪಿಪರವಾಗಿಹೇಳಿಕೆನೀಡಿ, ರಾಜಸ್ಥಾನಹೈಕೋರ್ಟ್ನಲ್ಲಿ ಕಾಂಗ್ರೆಸ್ಪಕ್ಷವನ್ನು ಸಮರ್ಥಿಸಿಕೊಳ್ಳುವಲ್ಲಿ ಯಶಸ್ವಿಯಾದರೆ. ಬಿಜೆಪಿಸರ್ಕಾರವನ್ನು ಉರುಳಿಸಿ ಮಣಿಪುರದಲ್ಲಿ ಹಾಲಿ ಪಕ್ಷವನ್ನು ತರುವಲ್ಲಿನೆರವಾದೆ. ಆದರೂ ನಾವು ಬಿಜೆಪಿಯೊಂದಿಗೆ ಒಡನಾಟ ಹೊಂದಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಬಹಿರಂಗವಾಗಿ ಟ್ವೀಟ್ ಮಾಡುವುದು ಇದು ಮೊದಲೆನಲ್ಲ. ರಾಜಸ್ಥಾನ ಸರ್ಕಾರದಲ್ಲಿನ ಭಿನ್ನಮತದ ಬಗ್ಗೆ ಕಪಿಲ್ ಸಿಬಲ್ ಬೇಸರಗೊಂಡು ಟ್ವೀಟ್ ಮಾಡಿದ್ದರು. ನಮ್ಮ ಪಕ್ಷದ ಬಗ್ಗೆ ನನಗೆ ಆತಂಕವಾಗುತ್ತಿದೆ. ನಮ್ಮ ಲಾಯಗಳಿಂದ ಕುದುರೆಗಳು ಹೊರ ಬಂದ ನಂತರ ನಾವು ಎಚ್ಚೆತ್ತುಕೊಳ್ಳುವುದೇ ಎಂದು ಪ್ರಶ್ನಿಸಿದ್ದರು.
ಈ ಬಗ್ಗೆ ಟ್ವೀಟ್ ಮಾಡಿದ ರಾಹುಲ್ ಗಾಂಧಿ, ಕೋವಿಡ್ 19, ಮಧ್ಯಪ್ರದೇಶ, ರಾಜಸ್ಥಾನ ಬಿಕ್ಕಟ್ಟಿನ ಸಮಯದಲ್ಲಿ ಹಿರಿಯ ನಾಯಕರಾದವರು ಈ ರೀತಿ ಪತ್ರ ಬರೆಯುವುದು ಸರಿಯಲ್ಲ ಎಂದು ರಾಹುಲ್ ಆಕ್ಷೇಪ ವ್ಯಕ್ತಪಡಿಸಿದರು. ಸೋನಿಯಗಾಂಧಿ ಗೆ ಆರೋಗ್ಯ ಸಮಸ್ಯೆ ಇದೆ. ಅವರು ಆಸ್ಪತ್ರೆ ದಾಖಲಾದ ವೇಳೆ ಪತ್ರ ಬರೆಯುವುದು ಎಷ್ಟು ಸರಿ? ಕಾಂಗ್ರೆಸ್ ಕೆಲ ಹಿರಿಯ ನಾಯಕರು ಬಿಜೆಪಿ ಜೊತೆ ಸೇರಿಕೊಂಡು ಈಗ ನಮ್ಮ ವಿರುದ್ಧವೇ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.



