Connect with us

Dvgsuddi Kannada | online news portal | Kannada news online

ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟ :  ರಾಹುಲ್ ಗಾಂಧಿ ಪರ ನಿಂತ ರಮ್ಯಾ  

ರಾಷ್ಟ್ರ ಸುದ್ದಿ

ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟ :  ರಾಹುಲ್ ಗಾಂಧಿ ಪರ ನಿಂತ ರಮ್ಯಾ  

ನವದೆಹಲಿ:  ಎಐಸಿಸಿ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್  ಭಿನ್ನಮತ ಸ್ಟೋಟಗೊಂಡಿದ್ದು, ಕಾಂಗ್ರೆಸ್ ಹಿರಿಯ ನಾಯಕರು ರಾಹುಲ್ ಗಾಂಧಿ ವಿರುದ್ಧ ಗರಂ ಆಗಿದ್ದಾರೆ. ಇದರ ಮಧ್ಯೆ ಇಲ್ಲಿವರೆಗೆ ತಟಸ್ಥವಾಗಿದ್ದ ಮಾಜಿ ಸಂಸದೆ ರಮ್ಯಾ ಎಂಟ್ರಿ ಕೊಟ್ಟಿದ್ದು, ಕೈ ಸಭೆಯ ಮಾಹಿತಿ ಸೋರಿಕೆಯಾಗುತ್ತಿದೆ  ಎಂದು ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರಮ್ಯಾ, ಬಂಡಾಯಕ್ಕೆ ಕಾರಣವಾದ 23 ಮಂದಿ ಪತ್ರ ಬರೆದು ಅದನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದಾರೆ. ಅಲ್ಲದೆ ಕಾಂಗ್ರೆಸ್ ಸಭೆಯ ಪ್ರತಿ ಕ್ಷಣದ  ಮಾಹಿತಿಗಳನ್ನು ನೀಡುವ ಮೂಲಕ ಎಲ್ಲಾ ವಿಚಾರಗಳನ್ನು ಸೋರಿಕೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಆಯ್ಕೆ ವಿಚಾರವಾಗಿ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ  ಹಿರಿಯ ನಾಯಕರ ಬಂಡಾಯದ ಬಗ್ಗೆ ಚರ್ಚೆ ಆಗಿದೆ.. ಝೂಮ್ ಅಪ್ಲಿಕೇಶನ್ ಮೂಲಕ ಈ ಸಭೆ ನಡೆಯುತ್ತಿದ್ದು, ಹಿರಿಯ ನಾಯಕರು ಭಾಗವಹಿಸಿದ್ದಾರೆ. ಸಭೆಯ ಆರಂಭದಲ್ಲೇ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೊಸ ಅಧ್ಯಕ್ಷರನ್ನು ಹುಡುಕಿ. ನಾನು ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವುದಿಲ್ಲ ಎಂದು ಹೇಳಿದ್ದಾರೆ.

rahul gandhi

ಈ ವೇಳೆ 20 ಪ್ರಮುಖರ ನಾಯಕರು ಪತ್ರ ಬರೆದ ವಿಚಾರಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅಸಮಾಧಾನ ವ್ಯಕ್ತಪಡಿಸಿದರು. ಕೋವಿಡ್ 19, ಮಧ್ಯಪ್ರದೇಶ, ರಾಜಸ್ಥಾನ ಬಿಕ್ಕಟ್ಟಿನ ಸಮಯದಲ್ಲಿ ಹಿರಿಯ ನಾಯಕರಾದವರು ಈ ರೀತಿ ಪತ್ರ ಬರೆಯುವುದು ಸರಿಯಲ್ಲ ಎಂದು ರಾಹುಲ್ ಆಕ್ಷೇಪ ವ್ಯಕ್ತಪಡಿಸಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top