ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ 8,580 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, 133 ಜನರು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,00,406ಕ್ಕೆ ಏರಿಕೆಯಾಗಿದೆ. ಒಟ್ಟಾರೆ 5,091 ಜನರು ಮೃತಪಟ್ಟಿದ್ದಾರೆ. ಈವರೆಗೆ 2,11,688 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇನ್ನು 83,608 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ. ಇದರಲ್ಲಿ 760 ಜನರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಗುಣಮುಖರಾಗಿ 7,249 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದಿನ 26/08/2020 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.@CMofKarnataka @BSYBJP @DVSadanandGowda @SureshAngadi_ @MoHFW_INDIA @UNDP_India @WHOSEARO @UNICEFIndia @sriramulubjp @drashwathcn @BSBommai https://t.co/LEjf4aDAsF pic.twitter.com/WIy9v8f0Gx
— Karnataka Health Department (@DHFWKA) August 26, 2020
ರಾಜಧಾನಿ ಬೆಂಗಳೂರಿನಲ್ಲಿ 3,284 ಜನರಿಗೆ ಸೋಂಕು ಪತ್ತೆಯಾಗಿದೆ. 2,630 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 1.15 ಲಕ್ಷದ ಗಡಿ ದಾಟಿದೆ. ಇಂದು 31 ಜನರು ಮೃತಪಟ್ಟಿದ್ದು, ಒಟ್ಟು 1,786 ಮಂದಿ ಸಾವನ್ನಪ್ಪಿದ್ದಾರೆ.
ಮೈಸೂರು 951, ಧಾರವಾಡ 255, ದಕ್ಷಿಣ ಕನ್ನಡ 314, ಬಳ್ಳಾರಿ 510, ಬೆಳಗಾವಿ 289, , ಬೀದರ್, 42, ಚಾಮರಾಜನಗರ 51, ಚಿಕ್ಕಬಳ್ಳಾಪುರ 87, ಚಿಕ್ಕಮಗಳೂರು 97, ಚಿತ್ರದುರ್ಗ 78, ದಾವಣಗೆರೆ 233, ಗದಗ 124, ಹಾಸನ 154, ಹಾವೇರಿ 164, ಬಾಗಲಕೋಟೆ 154, ಕಲಬುರಗಿ 180, ಕೊಡಗು 26, ಕೋಲಾರ 88, ಕೊಪ್ಪಳ 158, ಮಂಡ್ಯ 155, ಬೆಂಗಳೂರು ಗ್ರಾಮಾಂತರ 136 ರಾಯಚೂರು 136, ರಾಮನಗರ 47, ಶಿವಮೊಗ್ಗ 166, ತುಮಕೂರು 88, ಉಡುಪಿ 251, ಉತ್ತರ ಕನ್ನಡ 129, ವಿಜಯಪುರ 131 ಮತ್ತು ಯಾದಗಿರಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.



