ಡಿವಿಜಿ ಸುದ್ದಿ, ಹುಬ್ಬಳ್ಳಿ: ಹಳೇ ದ್ವೇಷ ವಿಚಾರವಾಗಿ ಸ್ನೇಹಿತರ ಮಧ್ಯ ಜಗಳ ವಿಕೋಪಕ್ಕೆ ಹೋಗಿ ಎರಡು ಕೊಲೆಯಲ್ಲಿ ಅಂತ್ಯವಾಗಿದೆ. ಗಣೇಶ ವಿರ್ಸಜನೆ ವೇಳೆಯೇ ಇಂತಹ ಘಟನೆ ನಡೆದಿರುವುದಕ್ಕೆ ಹುಬ್ಬಳ್ಳಿ ಜನರರಲ್ಲಿ ಆತಂಕ ಮನೆ ಮಾಡಿದೆ.
ಹುಬ್ಬಳ್ಳಿಯ ಗೋಪನಕೊಪ್ಪ ಬಳಿ ಘಟನೆ ನಡೆದಿದ್ದು, ಹಳೇ ಸ್ನೇಹಿತರಾಗಿದ್ದ ವಡ್ಡರ ಓಣಿಯ ಮಂಜುನಾಥ ಕಬ್ಬಿನ್ ಹಾಗೂ ನಿಯಾಜ್ ಜೋರಮ್ಮನವರ ಕೊಲೆಯಾದ ವ್ಯಕ್ತಿಗಳಾಗಿದ್ದಾರೆ. ಈ ಘಟನೆಯಲ್ಲಿ ಇನ್ನಿಬ್ಬರಿಗೆ ಗಂಭೀರವಾದ ಗಾಯಗಳಾಗಿದ್ದು, ಕೊಲೆಗೆ ಹಳೇ ದ್ವೇಷವೇ ಕಾರಣ ಎನ್ನಲಾಗುತ್ತಿದೆ
ಹಳೇ ವೈಷಮ್ಯದ ಹಿನ್ನೆಲೆ ನಿಯಾಜ್ ನನ್ನು ಹೊಡೆಯಬೇಕೆಂದು ಕಾದುಕುಳಿತಿದ್ದ ಮಂಜುನಾಥ, ನಿನ್ನೆ ತಡರಾತ್ರಿ ತನ್ನ ಸಹಚರರ ನಿಯಾಜ್ನನ್ನು ಹುಡುಕಿಕೊಂಡು ಹೋಗಿ ಹಲ್ಲೆ ಮಾಡಿದ್ದಾನೆ. ಈ ವೇಳೆ ಇಬ್ಬರು ಸಾವನ್ನಪ್ಪಿದ್ದಾರೆ.
ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ. ಗಣೇಶ ವಿರ್ಸಜನೆ ವೇಳೆ ಇಂತಹ ಘಟನೆ ನಡೆದಿರುವುದರಿಂದ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.



