ಕಾಂಗ್ರೆಸ್ ವಿರುದ್ಧ ಮತ್ತೆ ಕಿಡಿಕಾರಿದ ಕಪಿಲ್ ಸಿಬಲ್: ಬಿಜೆಪಿ ವಿರುದ್ಧ ಸರ್ಜಿಕಲ್ ದಾಳಿ ನಡೆಸಿ, ಕಾಂಗ್ರೆಸ್ ವಿರುದ್ಧವಲ್ಲ.!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ನವದೆಹಲಿ: ಬಿಜೆಪಿಯನ್ನು ಗುರಿಯಾಗಿಸಿಕೊಂಡು ಸರ್ಜಿಕಲ್‌ ದಾಳಿ ನಡೆಸಿ. ಆದರೆ, ಕಾಂಗ್ರೆಸ್ ವಿರುದ್ಧವೇ ದಾಳಿ ನಡೆಸುವುದು ಸರಿಯಲ್ಲ ಎಂದು  ತಮ್ಮದೇ ಪಕ್ಷದ ನಾಯಕರಿಗೆ ಕಾಂಗ್ರೆಸ್‌ ನಾಯಕ ಕಪಿಲ್‌ ಸಿಬಲ್‌ ಕಿಡಿಕಾರಿದ್ದಾರೆ.

ಉತ್ತರ ಪ್ರದೇಶದ ಪ್ರಭಾವಿ ಕಾಂಗ್ರೆಸ್‌ ಜಿತಿನ್‌ ಪ್ರಸಾದ್‌ ಅವರನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಹೋರಾಟಕ್ಕೆ ಇಳಿದಿರುವುದು ಆಕ್ಷೇಪ ವ್ಯಕ್ತಪಡಿಸಿದ ಅವರು, ಟ್ವೀಟ್‌ ಮಾಡಿ ಕಿಡಿಕಾರಿದ್ದಾರೆ.  ಕಾಂಗ್ರೆಸ್‌ ಪಕ್ಷ, ಬಿಜೆಪಿಯನ್ನು ಗುರಿಯಾಗಿಸಿಕೊಂಡು ಸರ್ಜಿಕಲ್‌ ದಾಳಿ ನಡೆಸುವ ಬದಲು ಕಾಂಗ್ರೆಸ್ಸಿಗರನ್ನೇ  ಗುರಿಯಾಗಿಸಿಕೊಂಡಿರುವುದು ದುರಾದುಷ್ಟಕರ. ಆ ಮೂಲಕ ತನ್ನ ಶಕ್ತಿಯನ್ನು ವ್ಯಯಮಾಡಿಕೊಳ್ಳುತ್ತಿದೆ ಎಂದಿದ್ದಾರೆ.

ಉತ್ತರ ಪ್ರದೇಶದಲ್ಲಿ ಜಿತಿನ್‌ ಪ್ರಸಾದ್‌ ಅವರನ್ನು ಗುರಿಯಾಗಿಸಿಕೊಂಡು ಹೋರಾಟಕ್ಕೆ ಇಳಿದಿರುವುದು ಹಾಗೂ ಶಿಸ್ತು ಕ್ರಮಕ್ಕೆ ಮುಂದಾಗಿರುವುದು ಒಳ್ಳೆಯ ಬೆಳವಣಿಗೆಯಲ್ಲ, ಅಧ್ಯಕ್ಷರ ಬದಲಾವಣೆಗಾಗಿ ಪತ್ರ ಬರೆದಿರುವುದಕ್ಕೆ ಈ ಶಿಕ್ಷೆಯೇ ಎಂದು ಕಪಿಲ್‌ ಸಿಬಲ್‌ ಸೇರಿದಂತೆ ಕೆಲ ಮುಖಂಡರು  ಪ್ರಶ್ನೆ ಮಾಡಿದ್ದಾರೆ. ಸಕ್ರಿಯ ಅಧ್ಯಕ್ಷರು ಬೇಕು ಎಂದು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ 23 ಜನ ಪತ್ರ ಬರೆದವರಲ್ಲಿ ಜಿತಿನ್‌ ಪ್ರಸಾದ್‌ ಕೂಡ ಒಬ್ಬರಾಗಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *