ನವದೆಹಲಿ: ಕಾಂಗ್ರೆಸ್ ಪಕ್ಷದ ಆಂತರಿಕ ಕಿತ್ತಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಹಿರಿಯ ಮುಖಂಡ ಕಪಿಲ್ ಸಿಬಲ್ ಬಳಿಕ ಮತ್ತೊಬ್ಬ ಹಿರಿಯ ನಾಯಕ, ರಾಜಸಭಾ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್ ಗುಡುಗಿದ್ದಾರೆ.
ಒಂದು ವೇಳೆ ಪಕ್ಷದ ಒಳಗಡೆ ಆಂತರಿಕ ಚುನಾವಣೆ ನಡೆಯದ್ದರೆ,ನಾವು 10 ರಿಂದ 15 ವರ್ಷಗಳ ಕಾಲ ಹಿಂದೆ ಹೋಗಿ ವಿರೋಧ ಪಕ್ಷದ ಸ್ಥಾನದಲ್ಲಿಇರಬೇಕಾಗುತ್ತದೆ. ಚುನಾವಣೆಯ ಮೂಲಕ ಆಯ್ಕೆಯಾದ ಅಧ್ಯಕ್ಷರಿಗೆ ಶೇ.51 ಮಂದಿಯ ಬೆಂಬಲವಾದರೂ ಇರುತ್ತದೆ. ಆದರೆ ಖಾಯಂ ಅಧ್ಯಕ್ಷರನ್ನು ನೇಮಕ ಮಾಡಿದರೆ ಅವರಿಗೆ ಪಕ್ಷದೊಳಗೆ ಶೇ.1ರಷ್ಟು ಕೂಡ ಬೆಂಬಲ ಸಿಗುವುದಿಲ್ಲ.
For the last many decades, we don't have elected bodies in the party. Maybe we should have pushed for it 10-15 yrs ago. Now we are losing elections after elections, and if we have to come back we need to strengthen our party by holding elections: Ghulam Nabi Azad, Congress pic.twitter.com/SWeF53DFBK
— ANI (@ANI) August 27, 2020
ಆಂತರಿಕ ಚುನಾವಣೆ ಮೂಲಕವೇ ಹೊಸ ಆಧ್ಯಕ್ಷರ ನೇಮಕವಾಗಬೇಕು. ಜತೆಗೆ ಕಾಂಗ್ರೆಸ್ ಕಾರ್ಯಕಾರಿಣಿ ಸದಸ್ಯರನ್ನೂ ಚುನಾವಣೆ ಮೂಲಕವೇ ಆಯ್ಕೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.ನಮ್ಮ ಪಕ್ಷದ ಒಳಗಡೆ ಚುನಾವಣೆ ನಡೆಯದ ಕಾರಣ ನಾವು ಹಲವು ಚುನಾವಣೆಗಳನ್ನು ಸೋತಿದ್ದೇವೆ. ಒಂದು ವೇಳೆ ಚುನಾವಣೆ ನಡೆದರೆ ನಾಯಕರು ಪಕ್ಷ ಸಂಘಟನೆಯತ್ತ ಮನಸ್ಸು ಮಾಡುತ್ತಾರೆ. ಈಗಲೇ ಈ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪಕ್ಷದ ಬಗ್ಗೆ ಆಸಕ್ತಿ ಇರುವ ವ್ಯಕ್ತಿ ನಾನು ಜಿಲ್ಲಾ ಅಧ್ಯಕ್ಷ, ರಾಜ್ಯದ ಅಧ್ಯಕ್ಷನಾಗಬೇಕೆಂದು ಬಯಸುತ್ತಾನೆ. ಆದರೆ ಚುನಾವಣೆ ನಡೆಯದೇ ಸುಲಭವಾಗಿ ನೇಮಕಗೊಳ್ಳುವವರು ಈ ಪ್ರಸ್ತಾಪವನ್ನು ವಿರೋಧಿಸುತ್ತಾರೆ ಎಂದು ಟಾಂಗ್ ನೀಡಿದ್ದಾರೆ.
ಪಕ್ಷದ ಸುಧಾರಣೆ ಬಯಸಿ ಕಾಂಗ್ರೆಸ್ನ 23 ಹಿರಿಯ ನಾಯಕರು ಪತ್ರ ಬರೆದಿದ್ದರು. ಸೋಮವಾರ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಈ ಪತ್ರದ ವಿಚಾರವನ್ನು ಪ್ರಸ್ತಾಪಿಸಿ ರಾಹುಲ್ಗಾಂಧಿ ಆಕ್ಷೇಪ ವ್ಯಕ್ತಪಡಿಸಿದ್ದರು. ಕೆಲ ನಾಯಕರು ಬಿಜೆಪಿ ಜೊತೆ ಸೇರಿದ್ದಾರೆ ಎಂದು ದೂರಿದ್ದರು.
ಒಂದು ವೇಳೆ ಬಿಜೆಪಿ ಸೇರಿದ್ದು ಸಾಬೀತಾದರೆ ಪಕ್ಷಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಅಜಾದ್ ಸವಾಲು ಎಸೆದಿದ್ದರು. ಬಳಿಕ ಈ ರೀತಿಯ ಯಾವುದೇ ಚರ್ಚೆಗಳು ನಡೆದಿಲ್ಲ. ಎಲ್ಲವೂ ಮಾಧ್ಯಮ ಸೃಷ್ಟಿ ಎಂದು ಕಾಂಗ್ರೆಸ್ ನಾಯಕರು ದೂರಿದ್ದರು.



