ಡಿವಿಜಿ ಸುದ್ದಿ, ದಾವಣಗೆರೆ : 2020-21ನೇ ಸಾಲಿಗೆ ಗೊತ್ತುಪಡಿಸಿದ ಬೆಳೆಗಳಲ್ಲಿ ಅತ್ಯತ್ತಮ ಇಳುವರಿ ಪಡೆಯುವ ರೈತರಿಗೆ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಂಬಂಧಪಟ್ಟ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಸೆ.15 ರಂದು ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.
ತಾಲ್ಲೂಕು ಮಟ್ಟದಲ್ಲಿ ಪ್ರಥಮ ಸ್ಥಾನಕ್ಕೆ ಬಹುಮಾನವಾಗಿ ರೂ.15 ಸಾವಿರ, ದ್ವಿತೀಯ ಬಹುಮಾನವಾಗಿ ರೂ.10 ಸಾವಿರ ಹಾಗೂ ತೃತೀಯ ಬಹುಮಾನವಾಗಿ ರೂ.5 ಸಾವಿರವಿದೆ.
ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಬಹುಮಾನ ರೂ.30 ಸಾವಿರ, ದ್ವಿತೀಯ ಸ್ಥಾನ ಬಹುಮಾನ 25 ಸಾವಿರ ಹಾಗೂ ತೃತೀಯ ಬಹುಮಾನ 20 ಸಾವಿರ ಬಹುಮಾನವಾಗಿರುತ್ತದೆ.
ಗೊತ್ತುಪಡಿಸಿದ ಬೆಳೆ, ಅರ್ಜಿ ನಮೂನೆ ಹಾಗೂ ಈ ಕುರಿತು ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ಜಿಲ್ಲೆಯ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಅಥವಾ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಕಚೇರಿಯ ವೇಳೆಯಲ್ಲಿ ಸಂಪರ್ಕಿಸಬೇಕೆಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



