ಮೀಸಲಾತಿ ಸಂವಿಧಾನಿಕ ಹಕ್ಕು, ಸರ್ಕಾರ ಹೆಚ್ಚಿಸದಿದ್ದರೆ ತಕ್ಕ ಪಾಠ:ಪ್ರಸನ್ನಾನಂದ ಸ್ವಾಮೀಜಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ,ಹರಿಹರ: ವಾಲ್ಮೀಕಿ ಸಮುದಾಯಕ್ಕೆ ಸಂವಿಧಾನಿಕವಾಗಿ ಸಲ್ಲಬೇಕಾದ ಮೀಸಲಾತಿ ಕಲ್ಪಿಸದಿದ್ದರೆ, ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುತ್ತೇವೆ ಎಂದು ಮಹಾರ್ಷಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಭಾನುವಾರ ನಡೆದ ಮೀಸಲಾತಿ ಹೆಚ್ಚಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ಶಿಕ್ಷಣ ಹಾಗೂ ಉದ್ಯೋಗ ಕ್ಷೇತ್ರದಲ್ಲಿ ಶೇ 7.5 ಮೀಸಲಾತಿ ಪಡೆಯುವುದು ವಾಲ್ಮೀಕಿ ಸಮಾಜದ  ಸಾಂವಿಧಾನಿಕ ಹಕ್ಕು. ಸರ್ಕಾರ ಮೀಸಲಾತಿ ಹೆಚ್ಚಳ ಮಾಡಿದರೆ ಅಭಿನಂದನೆ ಸಲ್ಲಿಸುತ್ತೇವೆ. ಇಲ್ಲವಾದಲ್ಲಿ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಸಿದರು.

ನಮ್ಮ ಸಮಾಜದ ಶಾಸಕರು, ಸಂಸದರನ್ನು ಒಳಗೊಂಡ ನಿಯೋಗದೊಂದಿಗೆ ಸೆ. 21ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮೀಸಲಾತಿ ಬಗ್ಗೆ ಮನವಿ ಸಲ್ಲಿಸಲಾಗುವುದು. ಈ ಬಾರಿಯ ಅಧಿವೇಶನದಲ್ಲಿ ಒಂದು ನಿರ್ಧಾರ ಕೈಗೊಳ್ಳಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸುತ್ತೇವೆ ಎಂದರು.

ಶ್ರೀಗಳು ರಾಜೀನಾಮೆಗೆ ಸೂಚನೆ ನೀಡಿದರೆ, ಮೀಸಲು ಕ್ಷೇತ್ರದಿಂದ ಗೆದ್ದಿರುವ ನಾವು ರಾಜೀನಾಮೆ ನೀಡಲು ಸಿದ್ಧ ಎಂದು ಶಾಸಕರು ತಿಳಿಸಿದರು.ಮಾಜಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, ರಾಜೀನಾಮೆ ನೀಡುವುದು ಪರಿಹಾರವಲ್ಲ. ಅಧಿಕಾರದಲ್ಲಿದ್ದುಕೊಂಡೇ ಹೋರಾಟ ಮಾಡಬೇಕು ಎಂದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *