Connect with us

Dvgsuddi Kannada | online news portal | Kannada news online

ನಾನು ಸತ್ತರೂ ಸಂಬರಗಿ ಬಿಡಲ್ಲ: ನಟಿ ಸಂಜನಾ

ಪ್ರಮುಖ ಸುದ್ದಿ

ನಾನು ಸತ್ತರೂ ಸಂಬರಗಿ ಬಿಡಲ್ಲ: ನಟಿ ಸಂಜನಾ

 ಡಿವಿಜಿ ಸುದ್ದಿ. ಬೆಂಗಳೂರು: ನಮ್ಮ ಅಮ್ಮನ ಹಾರ್ಟ್ ವೀಕ್, ಈಗಾಗಲೇ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಶಾಂತ್ ಸಂಬರಗಿ ಇನ್ನೂ ನನ್ನ ವಿರುದ್ಧ ಮಾತನಾಡುವುದನ್ನು ಮುಂದುವರಿಸಿದರೆ,  ಅಮ್ಮಗೆ ಏನಾದರೂ ಆದರೆ  ನಾನು ಸತ್ತರೂ ಅವನನ್ನು ನಾನು ಬಿಡಲ್ಲ ಎಂದು ನಟಿ ಸಂಜನಾ ಕಣ್ಣೀರು ಹಾಕಿದ್ದಾರೆ.

ಸುದ್ದಿಗಾರರೊಂದಿಗೆ  ಮಾತನಾಡಿದ ಅವರು,  ಕ್ಯಾಸಿನೋ ಕಾರ್ಯಕ್ರಮಕ್ಕೆ ನಾನು ಮುಖ್ಯ ಅತಿಥಿಯಾಗಿ ಹೋಗಿದ್ದೆ. ವಿವೇಕ್ ಒಬೇರಾಯ್ ನನ್ನ ಪಕ್ಕ ನಿಂತಿದ್ದರು, ಉಪೇಂದ್ರ ಸಹ ಭಾಗವಹಿಸಿದ್ದರು. ಎಲ್ಲಾ ರಾಜ್ಯಗಳಿಂದ 200 ಜನ ಪ್ರತಿನಿಧಿಗಳ ಬಂದಿದ್ದರು. ಈ ಬಗ್ಗೆ  ಊಹಾಪೋಹಾ  ಮಾತನಾಡಬೇಡಿ. ನಮ್ಮ ಅಮ್ಮಗೆ ಅರಾಮಿಲ್ಲ.  ಅವರಿಗೆ ಏನಾದರೂ ಆದರೆ ನಾನು ಬಿಡಲ್ಲ. ನಾನು ಒಂದು ಹೆಣ್ಣು, ನನಗೆ ಇನ್ನೂ ಮದುವೆಯಾಗಿಲ್ಲ. ನನ್ನ ಬಗ್ಗೆ ಮಾತನಾಡಲು ಅವರು ಯಾರು ಎಂದು  ಆಕ್ರೋಶ ವ್ಯಕ್ತಪಡಿಸಿದರು.

sajana 2

ಜಮೀರ್ ಅವರು ಯಾರು ಅಂತಾ ಗೊತ್ತಿಲ್ಲ. ಜಮೀರ್ ಅಹ್ಮದ್ ಸರ್ ದಯವಿಟ್ಟು ಪ್ರಶಾಂತ್ ಸಂಬರಗಿ ಅವರನ್ನು ಸುಮ್ಮನೇ ಬಿಡಬೇಡಿ. ಆ ಬೀದಿ ನಾಯಿ ನನ್ನ ಹಿಂದೆ ಯಾಕೆ ಬಿದ್ದಿದ್ದಾನೆ ಗೊತ್ತಿಲ್ಲ. ನಾನು ತುಂಬಾ ಕಷ್ಟಪಟ್ಟು ಮೇಲೆ ಬಂದ ಕಲಾವಿದೆ.

ನನ್ನ ತಪ್ಪು ಏನಿದೆ. ನಾನು ಸೆಲೆಬ್ರಿಟಿ ಆಗಿರೋದೆ ತಪ್ಪಾ. ನನಗೆ ತುಂಬಾ ಕಷ್ಟ ಆಗುತ್ತಿದೆ. ದಯವಿಟ್ಟು ಪ್ರಶಾಂತ್ ಸಂಬರಗಿಯನ್ನು ಬಿಡಬೇಡಿ ಎಂದು ಕೈ ಮುಗಿದು ಕಣ್ಣೀರು ಹಾಕಿದರು. ಮೊದಲಿಗೆ ಗಂಡ-ಹೆಂಡತಿ ಸಿನಿಮಾ ಮಾಡಿ ಬಿಎಂಡಬ್ಲ್ಯೂ ಕಾರಿನಲ್ಲಿ ಹೇಗೆ ಓಡಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದರು.

ರಾಹುಲ್ ಒಳ್ಳೆಯ ಹುಡುಗ, ಎಫ್ಐಆರ್‌ನಲ್ಲಿ ನನ್ನ ಹೆಸರು ಇಲ್ಲ. ಸಂಜನಾ ಡ್ರಗ್ಸ್ ನಲ್ಲಿದ್ದಾರೆ ಎಂದು ಹೇಳಲು ಯಾರಿಗೂ ಏನು ಅಧಿಕಾರ ಇಲ್ಲ.  ಏನು ಸಾಕ್ಷ್ಯ ಇಲ್ಲದೆ ಮಾತನಾಡುತ್ತಿದ್ದಾರೆ. ಆದರೆ ನಾನು ತುಂಬಾ ಕಷ್ಟಪಟ್ಟು ಇಲ್ಲಿಯವರೆಗೂ ಹೆಸರು ಮಾಡಿಕೊಂಡು ಬಂದಿದ್ದೇನೆ. 50 ಸಿನಿಮಾಗಳನ್ನು ಮಾಡಿರುವ ಪಂಚಭಾಷಾ ತಾರೆ ನಾನು. ನನಗೆ ಪ್ರಚಾರದ ಅವಶ್ಯಕತೆ ಇಲ್ಲ.

ನಾನು ಚಿಯರ್ ಗರ್ಲ್ ಅಲ್ಲ. ಚಪ್ಪಲಿ ತೆಗೆದುಕೊಂಡು ಹೊಡಿತ್ತೀನಿ. ಪ್ರಶಾಂತ್ ಸಂಬರಗಿ ಯಾರು ಅಂತನೇ ಗೊತ್ತಿಲ್ಲ. ಅವನ ನಂಬರ್ ಕೂಡ ಇಲ್ಲ. ಪ್ರಚಾರಕ್ಕಾಗಿ ಇಂತಹ ಆರೋಪ ಮಾಡುತ್ತಿದ್ದಾರೆ. ರಾಹುಲ್ ನನ್ನ ಸ್ವಂತ ಅಣ್ಣನ ತರ, ಅವನು ಒಳ್ಳೆಯ ಹುಡುಗ. ನನಗೆ ಭಾರತದ ಕಾನೂನಿನ ಮೇಲೆ ಗೌರವಿದೆ ಎಂದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top