ಡಿವಿಜಿ ಸುದ್ದಿ, ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಭೂಕುಸಿತ ಮತ್ತು ಪ್ರವಾಹದಿಂದ ಆಗಿರುವ ನಷ್ಟ ಮತ್ತು ಪರಿಹಾರಕ್ಕೆ ಸಂಬಂಧಿಸಿದಂತೆ ಅಧ್ಯಯನ ನಡೆಸಲು ಕೇಂದ್ರ ಗೃಹ ಸಚಿವಾಲಯ ಮತ್ತು ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಗಳ ನೇತೃತ್ವದ ತಂಡ ಇಂದು ಕೊಡಗಿಗೆ ಭೇಟಿ ನೀಡಿದೆ.
ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೈನಿಕ ಶಾಲೆಗೆ ಆಗಮಿಸಿರುವ ತಂಡಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮತ್ತು ವಿವಿಧ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದೆ. ಭೂಕುಸಿತ ಮತ್ತು ಪ್ರವಾಹದ ಸಾಕ್ಷ್ಯಚಿತ್ರಗಳನ್ನು ವೀಕ್ಷಿಸಿದರು.
ನಂತರ ಭೂಕುಸಿತವಾಗಿರುವ ಮಡಿಕೇರಿ ಸಮೀಪದ ಬೊಟ್ಲಪ್ಪ ಪೈಸಾರಿ, ಭಾಗಮಂಡಲ ಸಮೀಪದ ಚೇರಂಗಾಲ ಮತ್ತು ತಲಕಾವೇರಿ ಸಮೀಪ ಬ್ರಹ್ಮಗಿರಿ ಸಾಲಿನ ಪ್ರದೇಶಗಳಿಗೆ ಭೇಟಿ ನೀಡಲಿದೆ. ಪ್ರವಾಹ ಮತ್ತು ಭೂಕುಸಿತದಿಂದ ಆಗಿರುವ ನಷ್ಟದ ಬಗ್ಗೆ ಸ್ಥಳೀಯರಿಂದಲೂ ಮಾಹಿತಿ ಪಡೆಯಲಿದ್ದಾರೆ.



