ಮಹಾತ್ಮರ ಆದರ್ಶ ಪಾಲಿಸಿ: ಎಸ್. ಆರ್. ಶಿರಗುಂಬಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ.ಕಾಂ, ದಾವಣಗೆರೆ: ರಾಷ್ಟ್ರಪಿತ ಮಹಾತ್ಮ ಗಾಂಧಿಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರಂತಹ ಮಹಾತ್ಮರ ಧ್ಯೇಯ ಮತ್ತು ಆದರ್ಶಗಳನ್ನು ಪ್ರತಿಯೊಬ್ಬರು ಪಾಲಿಸಬೇಕಿದೆ ಎಂದು ಮಾಗನೂರು ಬಸಪ್ಪ ಪ್ರಾಥಮಿಕ ಶಾಲಾ ವಿಭಾಗದ ಮುಖ್ಯಸ್ಥ ಎಸ್. ಆರ್. ಶಿರಗುಂಬಿ ಪ್ರಶಿಕ್ಷಣ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಶ್ರೀಮತಿ ಸರ್ವಮಂಗಳಮ್ಮ ಮಾಗನೂರು ಬಸಪ್ಪ ಬಿ.ಇಡಿ ವಿಭಾಗ ಆಯೋಜಿಸಿದ್ದ ಮಹಾತ್ಮ ಗಾಂಧಿಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಜಯಂತಿ ಉದ್ಘಾಟಿಸಿ ಮಾತನಾಡಿದ ಅವರು, ಮಹಾತ್ಮರ ಆದರ್ಶಗಳನ್ನು ಪ್ರತಿಯೊಬ್ಬ ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡಬೇಕು ಎಂದು ಕರೆ ನೀಡಿದರು.

maganuru basappa dvgsudd

ಗಾಂಧಿಜಿ ಅವರು ಅಹಿಂಸೆ ಮತ್ತು ಸಂಪೂರ್ಣ ಅಹಿಂಸೆಯ ಮೇಲೆ ದೃಢವಾದ ನಂಬಿಕೆ ಇಟ್ಟಿದ್ದರು. ದಬ್ಬಾಳಿಕೆಗೆ ಪ್ರತಿರೋಧವನ್ನು ಒಡ್ಡುವ ಸತ್ಯಾಗ್ರಹ ದ ಪರಿಕಲ್ಪನೆಗೆ ಹೊಸ ಮಾರ್ಗ ನಿರ್ಮಾಪಕರಾಗಿದ್ದರು. ಆ ಮೂಲಕ ಭಾರತವನ್ನು ಸ್ವಾತಂತ್ರ್ಯಗೊಳಿಸಿದರು. ಈ ಸಂದೇಶ ವಿಶ್ವಾದ್ಯಂತದ ನಾಗರಿಕ ಹಕ್ಕುಗಳ ಮತ್ತು ಸ್ವಾತಂತ್ರ್ಯ ಆಂದೋಲನ ಗಳಿಗೆ ಸ್ಫೂರ್ತಿ ನೀಡಿತು ಎಂದರು.

maganuru basappa dvgsuddi 3

ಪ್ರಶಿಕ್ಷಣಾರ್ಥಿಗಳಾದ ಆಶಾ ಎಚ್.ಜಿ, ಫಾತೀಮ, ಶರ್ಮಿಳ, ತೇಜಸ್ವಿನಿ ಅವರಿಂದ ಭಗವದ್ಗೀತೆ, ಕುರಾನ್, ಬೈಬಲ್ ನ ಒಂದೊಂದು ಶ್ಲೋಕ ಹೇಳಿ ಅದರ ಅರ್ಥವನ್ನು ಸವಿವರವಾಗಿ ತಿಳಿಸಿದರು. ಇದಲ್ಲದೆ ಕಾಲೇಜ್ ಆವರಣದಲ್ಲಿ ಪ್ರಶಿಕ್ಷಣ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯ ಕೈಗೊಂಡರು.

ಈ ಸಂದರ್ಭದಲ್ಲಿ ಎಸ್ಎಸ್ಎಂಬಿ ಶಿಕ್ಷಣ ಮಹಾ ವಿದ್ಯಾಲಯದ ಪ್ರಾಚಾರ್ಯ ಡಾ. ಪ್ರೇಮಾ, ಮಾಗನೂರು ಬಸಪ್ಪ ಪ್ರೌಢಶಾಲೆಯ ಮುಖ್ಯಸ್ಥೆ ಕುಸುಮಾ, ಮಾಗನೂರು ಬಸಪ್ಪ ಪಬ್ಲಿಕ್ ಸ್ಕೂಲ್ ಪ್ರಾಚಾರ್ಯರಾದ ವಾಣಿಶ್ರೀ ಉಪಸ್ಥಿತರಿದ್ದರು. ಪ್ರಶಿಕ್ಷಣಾರ್ಥಿ ನಾಗೇಶ್ ಪ್ರಾರ್ಥನೆ ಮಾಡಿದರು. ದಿವ್ಯ ಆರ್ ಸ್ವಾಗತಿಸದರು. ಪ್ರಶಿಕ್ಷಣ ವಿದ್ಯಾರ್ಥಿಗಳಿಂದ ಸಮೂಹಿಕವಾಗಿ ರಾಮಭಜನೆ ಮಾಡಲಾಯಿತು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *