ದಾವಣಗೆರೆ : ಜಿಲ್ಲೆಯಾದ್ಯಂತ ಭಾರೀ ಮಳೆಗೆ ಹಳ್ಳ-ಕೊಳ್ಳಗಳು ಭರ್ತಿ ; ಇಂದು ಕೂಡ ಭಾರೀ ಮಳೆ ಸಾಧ್ಯತೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ:  ಜಿಲ್ಲೆಯಾದ್ಯಂತ ಮಂಗಳವಾರ ರಾತ್ರಿ ಸುರಿದ ಭಾರೀ  ಮಳೆಗೆ ಜಿಲ್ಲೆಯ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಹವಾಮಾನ ಇಲಾಖೆ  ದಾವಣಗೆರೆ ಜಿಲ್ಲೆಯಲ್ಲಿ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದ್ದು, ಇಂದು ಕೂಡ ಭಾರೀ ಮಳೆಯಾಗುವ ನಿರೀಕ್ಷೆ ಇದೆ.

ಮಂಗಳವಾರ ರಾತ್ರಿ ಜಗಳೂರು ತಾಲ್ಲೂಕಿನಲ್ಲಿ  ಸುರಿದ ಮಳೆಗೆ ತಾಲ್ಲೂಕಿನ  ಸಾಲಹಳ್ಳಿ, ಹೀರೇಮಲ್ಲನ ಹೊಳೆಯ ಹಳ್ಳ ಭರ್ತಿಯಾಗಿ ಹರಿಯುತ್ತಿದೆ.

https://www.facebook.com/permalink.php?story_fbid=324342105659338&id=105586904201527

 

ಹರಿಹರ ತಾಲ್ಲೂಕಿನಲ್ಲಿಯೂ ಕೂಡ ಭಾರೀ ಮಳೆ ಬಂದಿದ್ದು, ಬೆಳಕೆರೆ ಡ್ಯಾಂ ತುಂಬಿ ಹರಿಯುತ್ತಿದೆ.  ಮಳೆಯ ನೀರಿನಿಂದ  ಸಂಕ್ಲಿಪುರ- ಗುಳದಹಳ್ಳಿ ಗ್ರಾಮದ ನಡುವಿನ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮೇಲೆ ತುಂಬಿ ಎರಡು ಅಡಿಯಷ್ಟು ನೀರು ಹರಿಯುತ್ತಿದೆ. ಸೇತುವೆ ಮೇಲೆ ನೀರು ಹರಿಯುತ್ತಿರುವುದರಿಂದ ಸಂಚಾರ ವ್ಯವಸ್ಥೆ ಸ್ಥಗಿತವಾಗಿತ್ತು.

https://www.facebook.com/permalink.php?story_fbid=324348602325355&id=105586904201527

davangere rain 11

ಮಾಯಕೊಂ ತಾಲ್ಲೂಕಿನ  ಒಡೆಯರಹಳ್ಳಿಯಲ್ಲಿ ಮನೆಗಳಿಗೆ  ನೀರು ನುಗ್ಗಿದೆ.  ಮನೆಯಲ್ಲಿ ಇದ್ದ ಸಾಮಾಗ್ರಿಗಳು ನೀರುಪಾಲಾಗಿದೆ. ಇಲ್ಲಿನ ನಿವಾಸಿಗಳು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

https://www.facebook.com/permalink.php?story_fbid=324344118992470&id=105586904201527

ದಾವಣಗೆರೆ ತಾಲೂಕು ಭಾವಿಹಾಳ್ ಗ್ರಾಮದಲ್ಲಿ  ಜಲಾವೃತವಾದ ಹಿನ್ನಲೆ  ಕಾರೊಂದು ಕೊಚ್ಚಿಹೋದ ಘಟನೆ ನಡೆದಿದೆ. ಕಾರು ಚಾಲನೆ ಮಾಡಿಕೊಂಡು ಬರುವ ವೇಳೆ ದಾರಿ ಕಾಣದೆ ಹಳ್ಳಕ್ಕೆ ಇಳಿಸಿದ್ದೇನೆ. ಕಾರು ಹಳ್ಳಕ್ಕೆ ಬೀಳುತ್ತಿದ್ದಂತೆ ಕಾರಿನಿಂದ ಜಿಗಿದು ಪ್ರಾಣ ರಕ್ಷಣೆ ಮಾಡಿಕೊಂಡಿದ್ದಾನೆ.

https://www.facebook.com/permalink.php?story_fbid=324351908991691&id=105586904201527

 

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *