ಡಿವಿಜಿ ಸುದ್ದಿ, ಬೆಂಗಳೂರು: ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮಹತ್ವದ ಜವಾಬ್ದಾರಿ ನೀಡಿದ್ದಾರೆ. ಅದಕ್ಕಾಗಿ ನಾನು ಅವರಿಗೆ ಕೃತಜ್ಞನಾಗಿದ್ದೇನೆ ಎಂದು ನೂತನವಾಗಿ ರಾಷ್ಟ್ರೀಯ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ, ಮಹಾರಾಷ್ಟ್ರ ಉಸ್ತುವಾರಿಯಾಗಿ ನೇಮಕಗೊಂಡ ಎಚ್.ಕೆ. ಪಾಟೀಲ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ರಾಜಕೀಯವಾಗಿ ದೇಶದಲ್ಲೇ ಮಹತ್ವದ ರಾಜ್ಯ. ಸಾಕಷ್ಟು ಸವಾಲುಗಳಿರುವ ಅಲ್ಲಿ, ಪಕ್ಷದ ಗತವೈಭವ ಸ್ಥಾಪಿಸಲು ಯತ್ನಿಸುತ್ತೇನೆ ಎಂದರು.
ಸೋನಿಯಾ ಮತ್ತು ರಾಹುಲ್ ಗಾಂಧಿ ಅವರ ಮಾರ್ಗದರ್ಶನ. ವೇಣುಗೋಪಾಲ್ ಅವರಿಗೆ ವಿಶೇಷ ಕೃತಜ್ಞತೆ ಸಲ್ಲಿಸುತ್ತೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪಕ್ಷದ ಪ್ರಮುಖ ನಾಯಕರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಜಮೀರ್ ಅಹ್ಮದ್ ಖಾನ್ ತಮ್ಮ ವಿರುದ್ಧದ ಆರೋಪ ಸಾಬೀತಾದರೆ ಪೂರ್ತಿ ಆಸ್ತಿಯನ್ನೇ ಸರ್ಕಾರಕ್ಕೆ ಕೊಡುವುದಾಗಿ ಹೇಳಿದ್ದಾರೆ. ಡ್ರಗ್ ಜಾಲದ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ ಎಂದರು.
ಕೋವಿಡ್ನಿಂದ ಮೃತಪಟ್ಟವರ ಪ್ರಮಾಣದ ಬಗ್ಗೆ ಸರ್ಕಾರ ವಾಸ್ತವ ತಿಳಿಸಬೇಕು. ರಾಷ್ಟ್ರೀಯ ಸರಾಸರಿಗಿಂತ ರಾಜ್ಯದ್ದೇ ಹೆಚ್ಚಿದೆ. ಸರ್ಕಾರದ ಜನರಿಗೆ ತಪ್ಪು ಮಾಹಿತಿ ನೀಡುತ್ತಿದೆ ಎಂದು ತಿಳಿಸಿದರು.



